ರಾಮನಗರ: ನಾಡಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡಶಿವನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಡಬಂದೂಕಿನಿಂದ ಗುಂಡು ತಗುಲಿ ಶಮಾ(7) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ನಾಡಬಂದೂಕು ತೆಗೆದುಕೊಂಡು ಮಕ್ಕಳು ಆಟವಾಡುವಾಗ ಮೃತ ಶಮಾ ಸಹೋದರ ಸಾಜೀದ್(16) ಬಂದೂಕಿನ ಟ್ರಿಗರ್ ಒತ್ತಿದ್ದಾನೆ. ಈ ವೇಳೆ ನಾಡಬಂದೂಕಿನ ಗುಂಡು ತಗುಲಿ ಶಮಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುಪಿ ಮೂಲದ ಅಮಿನುಲ್ಲಾ, ಸಮ್ಸೂನ್ ಕುಟುಂಬ ಮೂರು ದಿನದ ಹಿಂದಷ್ಟೆ ಕೂಲಿ ಕೆಲಸಕ್ಕೆ ಬಂದಿದ್ದು ಮಲ್ಲೇಶ ಎಂಬಾತನ ಜಮೀನಿನಲ್ಲಿ ಕೆಲಸಕ್ಕಿದ್ದರು. ತಂದೆ-ತಾಯಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಾಜಿದ್ ಹಾಗೂ ಶಮಾ ನಾಡಬಂದೂಕಿನೊಂದಿಗೆ ಆಟವಾಡಿದ್ದಾರೆ. ಈ ವೇಳೆ ತನ್ನ ಅರಿವಿಗೆ ಬರೆದೇ ಸಾಜಿದ್ ಬಂದೂಕಿನ ಟ್ರಿಗರ್ ಒತ್ತಿದ್ದಾನೆ. ಇದರಿಂದ ಗುಂಡು ಶಮಾನಿಗೆ ತಗುಲಿದೆ. ಗುಂಡು ಹಾರಿಸಿದ ಸಾಜೀದ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಬಂದೂಕು ಇಟ್ಟಿದ್ದ ತೋಟದ ಮಾಲೀಕ ಮಲ್ಲೇಶ್ನನ್ನೂ ಬಂಧಿಸಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.