ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ. ಈ ಚಿತ್ರ ನೋಡಿದ ಅನೇಕರು ಮಂತ್ರಮುಗ್ಧರಾಗಿದ್ದಾರೆ. ಒಟಿಟಿಗೆ ಕಾಲಿಟ್ಟ ಈ ಚಿತ್ರವನ್ನು ಪ್ರೇಕ್ಷಕರು ಹಲವು ಬಾರಿ ವೀಕ್ಷಣೆ ಮಾಡಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ’ (Kantara Movie) ಆಸ್ಕರ್ ರೇಸ್ಗೆ ಇಳಿಯಲು ಪ್ರಯತ್ನ ಮಾಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರು ಮಾಹಿತಿ ನೀಡಿದ್ದಾರೆ. ‘ಆರ್ಆರ್ಆರ್’ ಮಾದರಿಯಲ್ಲೇ ‘ಕಾಂತಾರ’ ಕೂಡ ಆಸ್ಕರ್ ರೇಸ್ಗೆ ತೆರಳಲು ಪ್ರಯತ್ನಿಸಿದೆ.
ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ’ ಕಡೆಯಿಂದ ‘ಆರ್ಆರ್ಆರ್’ ಸಿನಿಮಾ ಆಸ್ಕರ್ ಸ್ಪರ್ಧೆಗೆ ಅರ್ಹತೆ ಪಡೆದಿರಲಿಲ್ಲ. ಈ ಕಾರಣಕ್ಕೆ For Your Consideration ಮೂಲಕ ‘ಆರ್ಆರ್ಆರ್’ ಸಿನಿಮಾ ಆಸ್ಕರ್ ರೇಸ್ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ವಿಜಯ್ ಅವರು ಈ ಬಗ್ಗೆ ಮಾತನಾಡಿದ್ದಾರೆ.
‘ಆಸ್ಕರ್ ರೇಸ್ನಲ್ಲಿ ಸ್ಪರ್ಧೆ ಮಾಡಲು ನಾವು ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಅಂತಿಮ ನಾಮನಿರ್ದೇಶನ ಪಟ್ಟಿ ಇನ್ನಷ್ಟೇ ಬರಬೇಕಿದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆಯೂ ವಿಜಯ್ ಅವರು ಮಾತನಾಡಿದ್ದಾರೆ. ‘ರಿಷಬ್ ಶೆಟ್ಟಿ ಅವರು ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಮರಳಿದ ನಂತರದಲ್ಲಿ ಈ ಸಿನಿಮಾಗೆ ಸೀಕ್ವೆಲ್ ಮಾಡಬೇಕೋ ಅಥವಾ ಪ್ರೀಕ್ವೆಲ್ ಮಾಡಬೇಕೋ ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ‘ಕಾಂತಾರ 2’ ಮಾಡಲು ನಾವು ಪ್ಲ್ಯಾನ್ ಮಾಡಿಕೊಂಡಿರುವುದು ನಿಜ ಆದರೆ, ಅದಕ್ಕೆ ಟೈಮ್ಲೈನ್’ ಎಂದಿದ್ದಾರೆ ವಿಜಯ್.
ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ರಿಷಬ್ ಈ ಚಿತ್ರಕ್ಕಾಗಿ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಹಲವು ಆಫರ್ಗಳು ಅವರನ್ನು ಅರಸಿ ಬರುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ