Home ಸಿನಿಮಾ ‘ಇಬ್ಬರ ನಡುವಿನ ಮುದ್ದಿನ ರಾಣಿ’ ಚಿತ್ರಕ್ಕೆ ಚಾಲನೆ

‘ಇಬ್ಬರ ನಡುವಿನ ಮುದ್ದಿನ ರಾಣಿ’ ಚಿತ್ರಕ್ಕೆ ಚಾಲನೆ

80
0

ಬೆಂಗಳೂರು:

ಚಂದನವನದಲ್ಲಿ ಕೆಲವು ದಿನಗಳಿಂದ ನೂತನ ಚಿತ್ರಗಳು ಆರಂಭವಾಗುತ್ತಿದೆ.‌ ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ‌ ಮುದ್ದಿನ ರಾಣಿ’.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ದೊಡ್ಡಬಳ್ಳಾಪುರ ಬಳಿಯಿರುವ ಅಂಗಾಸನ ರೆಸಾರ್ಟ್ ನಲ್ಲಿ ನೆರವೇರಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ವೈಎಸ್‍ಆರ್ಪಿ ಸ್ಟೇಟ್ ಜಾಯಿಂಟ್ ಸೆಕ್ರೆಟರಿ ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ‌ನೀಡಿದ್ದಾರೆ.

ಕನ್ನಡ ‌ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ.ಆರ್ ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ‌‌ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ 15 ‌ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು‌ ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನಾ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

LEAVE A REPLY

Please enter your comment!
Please enter your name here