Home ಅಪರಾಧ ಚೆಕ್ ಬೌನ್ಸ್ ಪ್ರಕರಣ; ಕಾಫಿ ಡೇ ದಿ.ಸಿದ್ದಾರ್ಥ್ ಹೆಗ್ಡೆ ಪತ್ನಿಗೆ ಜಾಮೀನು

ಚೆಕ್ ಬೌನ್ಸ್ ಪ್ರಕರಣ; ಕಾಫಿ ಡೇ ದಿ.ಸಿದ್ದಾರ್ಥ್ ಹೆಗ್ಡೆ ಪತ್ನಿಗೆ ಜಾಮೀನು

96
0
Advertisement
bengaluru

ಚಿಕ್ಕಮಗಳೂರು:

ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಕಾಫಿ ಡೇಯ ದಿವಂಗತ ಸಿದ್ದಾರ್ಥ್ ಹೆಗ್ಡೆ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ‌ಎಸ್.ಎಂ.ಕೃಷ್ಣ ಅವರ ಪುತ್ರಿ ಮಾಳವಿಕಾ ಅವರಿಗೆ ಜಾಮೀನು ದೊರೆತಿದೆ.

ಕೋರ್ಟ್‌ ಗೆ ಇಂದು ಹಾಜರಾದ ಮಾಳವಿಕ‌ ಅವರಿಗೆ ಜಾಮೀನು ನೀಡಲಾಗಿದೆ.

ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಾಫಿ ಬೆಳೆಗಾರರು ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು.

bengaluru bengaluru

ಬಂಧನ ವಾರಂಟ್ ಹೊರಡಿಸಿದ್ದ ಬೆನ್ನಲ್ಲೇ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ ಸಿ ಕೋರ್ಟ್ ಗೆ ಹಾಜರಾಗಿದ್ದು, ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು.


bengaluru

LEAVE A REPLY

Please enter your comment!
Please enter your name here