Home Uncategorized ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 

ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 

16
0
Advertisement
bengaluru

ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ: ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಾಸ್ತವಾಡ ಗ್ರಾಮದಲ್ಲಿ ಹರ್ಷ ಶುಗರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಡಿಕೆ ಶಿವಕುಮಾರ್,  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ ಕರ್ ಅವರನ್ನು ಕ್ಷೇತ್ರದ ಮತದಾರರು ಗೆಲ್ಲಿಸಿದ್ದರಿಂದ ಕ್ಷೇತ್ರದಲ್ಲಿ ಅಪಾರ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು. 

 ಇಲ್ಲಿನ ಜನರ ಕಲ್ಯಾಣ ಚಟುವಟಿಕೆಗಳನ್ನು ಮಾಡುವಲ್ಲಿ ಶಾಸಕಿ ಸಮರ್ಥರು ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಯಿತು ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಜನರು ಒಗ್ಗಟ್ಟಿನಿಂದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಅವರು ಮನವಿ ಮಾಡಿದರು. 


bengaluru

LEAVE A REPLY

Please enter your comment!
Please enter your name here