Home Uncategorized ಪೋಕ್ಸೋ ಪ್ರಕರಣ: ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಪೋಕ್ಸೋ ಪ್ರಕರಣ: ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

8
0
bengaluru

ಚಿತ್ರದುರ್ಗದ  ಮುರುಘಾ ಮಠದ ಡಾ.ಶಿವಮೂರ್ತಿ ವಿರುದ್ಧ ದಾಖಲಾಗಿರುವ  ಪೋಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಕೆ.ಕೋಮಲಾ ಮಂಗಳವಾರ ತಿರಸ್ಕರಿಸಿದ್ದಾರೆ. ಚಿತ್ರದುರ್ಗ: ಚಿತ್ರದುರ್ಗದ  ಮುರುಘಾ ಮಠದ ಡಾ.ಶಿವಮೂರ್ತಿ ವಿರುದ್ಧ ದಾಖಲಾಗಿರುವ  ಪೋಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಕೆ.ಕೋಮಲಾ ಮಂಗಳವಾರ ತಿರಸ್ಕರಿಸಿದ್ದಾರೆ.

ಮಠಾಧೀಶರ ಪರ ವಕೀಲರು ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು. ನಂತರ ತಮ್ಮ ಅರ್ಜಿಯನ್ನು ಹಿಂಪಡೆದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು.

ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ಮಠಾಧೀಶರ ಮನವಿಯನ್ನು ತಿರಸ್ಕರಿಸಿದರು. ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವುದಾಗಿ ಮಠಾಧೀಶರ ಪರ ವಕೀಲರು ತಿಳಿಸಿದ್ದಾರೆ.

ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರಿಬ್ಬರು ನೀಡಿದ ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸರು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಿ ತನಿಖೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here