Home Uncategorized ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ: ರಮೇಶ್ ಜಾರಕಿಹೊಳಿ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ: ರಮೇಶ್ ಜಾರಕಿಹೊಳಿ

18
0
Advertisement
bengaluru

ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಟಾಪಟಿ ಮುಂದುವರಿದಿದೆ. ಬೆಳಗಾವಿ: ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಟಾಪಟಿ ಮುಂದುವರಿದಿದೆ.

ಇತ್ತೀಚೆಗೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ನಡೆದ ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಹೆಬ್ಬಾಳ್ಕರ್ ಟೀಕಿಸಿದ ಬೆನ್ನಲ್ಲೇ, ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾರೇ ಬಂದರೂ ಬಿಜೆಪಿಯನ್ನು ಗೆಲ್ಲಿಸುತ್ತೇನೆ ಎಂದು ಮಂಗಳವಾರ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ‘ಬೆಳಗಾವಿ ಗ್ರಾಮಾಂತರ ಕ್ಷೇತ್ರ ಬಯಲಾಗಿದೆ, ಈ ಕದನಕ್ಕೆ ಯಾರು ಬೇಕಾದರೂ ಬರಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೂರು ತಿಂಗಳ ಹಿಂದೆ ನಾಯಕಿಯಂತೆ ಸವಾಲು ಹಾಕಿದ್ದರು, ಹೀಗಾಗಿ ನಾನು ಮೈದಾನಕ್ಕಿಳಿದಿದ್ದೇನೆ. ಪಕ್ಷದ ಅಭ್ಯರ್ಥಿ ಯಾರೇ ಆಗಿದ್ದರೂ ಬಿಜೆಪಿ ಪಕ್ಷವನ್ನು ಗೆಲ್ಲಿಸುತ್ತೇನೆ.

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯನ್ನು ಪಕ್ಷ ಇನ್ನೂ ಅಂತಿಮಗೊಳಿಸಿಲ್ಲ, ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಆದರೆ ಪಕ್ಷದ ಅಭ್ಯರ್ಥಿಯನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಿಸುತ್ತೇನೆ, ಹೆಬ್ಬಾಳ್ಕರ್ ಅವರು ನನ್ನನ್ನು ‘ಸ್ವಯಂ ಘೋಷಿತ’ ನಾಯಕ ಎಂದು ಕರೆದಿದ್ದಾರೆ.

bengaluru bengaluru

ಯಾರು ‘ಸ್ವಯಂ ಘೋಷಿತ’  ಮಹಿಳೆ. ಅವರು ನನ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ, ನಾನು ತುಂಬಾ ಅಲರ್ಟ್ ಆಗಿದ್ದೇನೆ ಮತ್ತು ಆಕೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ.ನನ್ನದೇ ಆದ ರಾಜಕೀಯ ತಂತ್ರವಿದೆ.ಈ ಬಾರಿ ಅದರಂತೆ  ನಡೆಯುವೆ, ಅದರಲ್ಲಿ ಯಾವುದೇ ವೈಫಲ್ಯವಿಲ್ಲ ಎಂದಿದ್ದಾರೆ.

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಪ್ರತಿಪಾದಿಸಿದರು. ವೈಯಕ್ತಿಕ ಅಭಿಪ್ರಾಯಗಳನ್ನು ಮನೆಯಲ್ಲಿಟ್ಟುಕೊಂಡು ಪಕ್ಷದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಬಿಜೆಪಿ ಪಕ್ಷ ನನ್ನನ್ನು ಈಗ ಪಕ್ಷದ ಸಮಿತಿಗೆ ಸೇರಿಸಿದೆ, ಬೆಳಗಾವಿಯಲ್ಲಿ ಪಕ್ಷದ ಗೆಲುವಿಗೆ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಶೀಘ್ರದಲ್ಲೇ ಬೆಳಗಾವಿಯ ಬೃಹತ್ ಸಮಾವೇಶ ನಡೆಯಲಿದೆ ರಮೇಶ್ ಜಾರಕಿಹೊಳಿ ಹೇಳಿದರು.


bengaluru

LEAVE A REPLY

Please enter your comment!
Please enter your name here