Home Uncategorized ಮೈಸೂರು: ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ, ಮತ್ತಿಬ್ಬರ ತೀವ್ರ ವಿಚಾರಣೆ

ಮೈಸೂರು: ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ, ಮತ್ತಿಬ್ಬರ ತೀವ್ರ ವಿಚಾರಣೆ

24
0

ನಿನ್ನೆ ಗುಜರಾತ್‌ನಲ್ಲಿ ಬಂಧಿತರಾಗಿದ್ದ ಸ್ಯಾಂಟ್ರೋ ರವಿ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ. ಮೈಸೂರು: ನಿನ್ನೆ ಗುಜರಾತ್‌ನಲ್ಲಿ ಬಂಧಿತರಾಗಿದ್ದ ಸ್ಯಾಂಟ್ರೋ ರವಿ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.

ಬಂಧಿತ ಸ್ಯಾಂಟ್ರೋ ರವಿ ಜೊತೆ,  ರಾಮ್‌ಜಿ ಮತ್ತು ಶ್ರುತೇಶ್ ಕುಮಾರ್ ಎಂಬುವರನ್ನು ಬಂಧಿಸಿರುವ ನಗರ ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ವಿಜಯನಗರ ಠಾಣೆಗೆ ಕರೆತರಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಇದನ್ನೂ ಓದಿ: ವೇಷ ಬದಲಾಯಿಸಿ ಗುಜರಾತಿನಲ್ಲಿ ತಲೆಮರೆಸಿಕೊಂಡಿದ್ದ ‘ಸ್ಯಾಂಟ್ರೋ ರವಿ’ ಸೇರಿ ನಾಲ್ವರ ಸೆರೆ: ಎಡಿಜಿಪಿ ಅಲೋಕ್ ಕುಮಾರ್

ತನಿಖಾಧಿಕಾರಿ ಎಸಿಪಿ ಶಿವಶಂಕರ್ ಅವರು ಬಂಧಿತರನ್ನು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಪೌರಾಯುಕ್ತ ಬಿ ರಮೇಶ್, ಎಡಿಜಿಪಿ ಅಲೋಕ್ ಕುಮಾರ್ ಉಪಸ್ಥಿತರಿದ್ದರು. ಆರೋಪಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೂವರನ್ನು ಮಧ್ಯಾಹ್ನ 12.30ರ ನಂತರ ಆರನೇ ಎಡಿಜೆ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.
 

LEAVE A REPLY

Please enter your comment!
Please enter your name here