Home Uncategorized ರಾಮನಗರ: ಊಟದ ವಿಚಾರಕ್ಕಾಗಿ ಜಗಳ; ತಾಯಿ ಮತ್ತು ಮಗ ಆತ್ಮಹತ್ಯೆ

ರಾಮನಗರ: ಊಟದ ವಿಚಾರಕ್ಕಾಗಿ ಜಗಳ; ತಾಯಿ ಮತ್ತು ಮಗ ಆತ್ಮಹತ್ಯೆ

20
0

ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್​ನಲ್ಲಿ ನಡೆದಿದೆ. ರಾಮನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್​ನಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ನೀರಿನ ಸಂಪಿಗೆ  ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದರಿಂದ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಐಜೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here