ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ… ಬೆಳಗಾವಿ: ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.
ರಾಜ್ಯ ಸರ್ಕಾರ ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ನಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ನಲ್ಲಿದ್ದ ಲಿಂಗಾಯತರನ್ನು 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹೇಳಿದ್ದಾರೆ.
ಇದನ್ನು ಓದಿ: ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಪ್ರತಿಭಟನೆ: ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನಾಕಾರರ ಆಕ್ರೋಶ
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, 2ಎ ಮೀಸಲಾತಿ ಕೇಳಿದ್ದ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತರಿಗೆ 2 ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. 3ಎ ನಲ್ಲಿದ ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲಾಗಿದೆ. ಇದರಿಂದ 2ಎ ಮತ್ತು 2 ಬಿ ಮೀಸಲಾತಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಕಳೆದ ವಾರ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು, ಪಂಚಮಶಾಲಿ ಸಮುದಾಯವನ್ನು ಈಗಿರುವ 3ಬಿಯಿಂದ 2ಬಿಗೆ ಸೇರ್ಪಡೆ ಮಾಡುವ ಬದಲು ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿದ್ದರು.