Home Uncategorized ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅಭಿಮಾನಿಗಳ ಭಾವನೆಗೆ ಸರ್ಕಾರ ಸಕಾರಾತ್ಮಕವಾಗಿ‌ ಸ್ಪಂದಿಸಲಿದೆ: ಸಿಎಂ ಬೊಮ್ಮಾಯಿ

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅಭಿಮಾನಿಗಳ ಭಾವನೆಗೆ ಸರ್ಕಾರ ಸಕಾರಾತ್ಮಕವಾಗಿ‌ ಸ್ಪಂದಿಸಲಿದೆ: ಸಿಎಂ ಬೊಮ್ಮಾಯಿ

15
0

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಮುನ್ಸೂಚನೆ ನೀಡಿದ್ದಾರೆ. ಮೈಸೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಮುನ್ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ವಿಷ್ಣುವರ್ಧನ್ ಸ್ಮಾರಕವನ್ನು ಉದ್ಧಾಟನೆ ಮಾಡಿದ ಬಳಿಕ ಅವರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ’70ರ ದಶಕದಲ್ಲಿ ನಾಗರಹಾವು ಚಿತ್ರದ ಮೂಲಕ ನಾಡಿನ ಜನಮನ ಗೆದ್ದವರು ವಿಷ್ಣು. ನಾಲ್ಕು ದಶಕದ ಕಾಲ ಚಿತ್ರಗಳ ಮೂಲಕ‌ ಕನ್ನಡ ಸಂಸ್ಕೃತಿಯ ಧ್ವಜವನ್ನು ಎತ್ತಿ‌ಹಿಡಿದರು. ಅವರ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ’ ಎಂದರು.

ಇಂದು ಮೈಸೂರಿನಲ್ಲಿ ಅಭಿನಯ ಭಾರ್ಗವ, ಅಭಿಮಾನಿಗಳ ನೆಚ್ಚಿನ ಸಾಹಸ ಸಿಂಹ, ದಿವಂಗತ ನಟ ಡಾ.ವಿಷ್ಣುವರ್ಧನ್ ರವರ ಸ್ಮಾರಕವನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದೆನು. pic.twitter.com/RpNohQ9aZC
— Basavaraj S Bommai (@BSBommai) January 29, 2023

‘ವಿಷ್ಣು ಮಾತುಗಳು ಕಲಾರಸಿಕರ ನಾಲಿಗೆಯ ತುದಿಯಲ್ಲಿವೆ. ಮಾನವೀಯತೆಯನ್ನು ಮೆರೆದ ವಿಷ್ಣು ಶಕ್ತಿಯಾಗಿದ್ದವರು ಭಾರತಿ. ಸ್ಮಾರಕ ನಿರ್ಮಾಣಕ್ಕೆ ಸ್ಥಳ ವಿವಾದ ಸೇರಿದಂತೆ ಹಲವು ಕಷ್ಟಗಳು‌ ಎದುರಾದಾಗ ಮೈಸೂರಿನಲ್ಲೇ ಸ್ಥಾಪಿಸುವ ಗಟ್ಟಿ ನಿಲುವು ತೆಗೆದುಕೊಂಡರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 11 ಕೋಟಿ ರೂ ಅನುದಾನ ನೀಡಿದ್ದರಿಂದ ಸ್ಮಾರಕ ಎಲ್ಲರ ಎದುರು ಭವ್ಯವಾಗಿ ನಿಂತಿದೆ. ಸಿನಿಮಾ ಕಲಿಕಾ ಸಂಸ್ಥೆ ನಿರ್ಮಾಣ ಕನಸಿದ್ದು, ಅದಕ್ಕೂ ಸರ್ಕಾರದ ಸಹಕಾರವಿದೆ’ ಎಂದು ಭರವಸೆ ನೀಡಿದರು.‌

ನಾಗರಹಾವು ಸಿನೆಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾದ ಡಾ ವಿಷ್ಣುವರ್ಧನ್ ಯಾವುದೇ ಪಾತ್ರಕ್ಕೂ ಸೈ ಎನ್ನವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಡಾ ವಿಷ್ಣುವರ್ಧನ್ ಅವರಿಗೆ ಜೀವನದಲ್ಲಿ ಜೊತೆಯಾಗಿ,ಶಕ್ತಿ ಯಾಗಿ ನಿಂತಿದ್ದ ಪದ್ಮಶ್ರೀ ಭಾರತಿ ಅವರು ವಿಷ್ಣುವರ್ಧನ್ ಅವರು ಜನಿಸಿದ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣ ಮಾಡಬೇಂದು  ಹಂಬಲಿಸಿ ,ಪರಿಶ್ರಮ ವಹಿಸಿ ಸ್ಮಾರಕ ನಿರ್ಮಾಣ ಮಾಡಿಸಿದ್ದಾರೆ. ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ ಸಾರ್ವಜನಿಕರು ಹಾಗೂ  ಚಿತ್ರ ರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ: ವಿಷ್ಣು ಅಭಿಮಾನಿಗಳ ಕನಸು ನನಸು: ಮೈಸೂರಲ್ಲಿ ‘ವಿಷ್ಣುವರ್ಧನ್ ಸ್ಮಾರಕ’ ಅನಾವರಣ

ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರುವ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲ ನೋಡಿದವರು ಖಂಡಿತವಾಗಿ ವಿಷ್ಣುವರ್ಧನ್ ಅಭಿಮಾನಿ ಆಗುತ್ತಿದ್ದರು. ಇಂದಿಗೂ ಕೂಡ ವಿಷ್ಣುವರ್ಧನ್ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ವಿಷ್ಣುವರ್ಧನ್ ಭಾವ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಸ್ಮಾರಕ ನಿರ್ಮಾಣಕ್ಕೆ ಯಡಿಯೂರಪ್ಪ ನವರು 11 ಕೋಟಿ ಬಿಡುಗಡೆ ಮಾಡಿಸಿದ್ದರು. ಇದಕ್ಕಾಗಿ ನಾನು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಡಾ ವಿಷ್ಣುವರ್ಧನ್  ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅವರ ಭಾವನೆಗಳಿಗೆ ಸಕಾರಾತ್ಮಕವಾಗಿ  ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದರು.
 

LEAVE A REPLY

Please enter your comment!
Please enter your name here