Home ಕರ್ನಾಟಕ ʼಗ್ಯಾರಂಟಿʼ ಕೊಟ್ಟಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲು ಹಣವಿಲ್ಲ : ಜೆಡಿಎಸ್‌

ʼಗ್ಯಾರಂಟಿʼ ಕೊಟ್ಟಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲು ಹಣವಿಲ್ಲ : ಜೆಡಿಎಸ್‌

19
0

ಬೆಂಗಳೂರು : ʼಗ್ಯಾರಂಟಿʼ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ ಎಂದು ಜೆಡಿಎಸ್‌ ಟೀಕಿಸಿದೆ.

ಈ ಕುರಿತು ಎಕ್ಸ್‌ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಜೆಡಿಎಸ್‌, ” ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. 3 ತಿಂಗಳಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು” ಎಂದು ರಾಜ್ಯ ಸರಕಾರದ ವಿರುದ್ಧ ಜೆಡಿಎಸ್‌ ಹರಿಹಾಯ್ದಿದೆ.

ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಬಿಗಿದಿದ್ದಾರೆ. “ರಾಜ್ಯದ ಒಬ್ಬನೇ ಒಬ್ಬ ಸರಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ಗುಡುಗಿದ್ದರು.

ಹಾಗಾದರೆ, ಮಾನ್ಯ ಸಿದ್ದರಾಮಯ್ಯನವರೇ.. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಜೆಡಿಎಸ್‌ ಆಗ್ರಹಿಸಿದೆ.

LEAVE A REPLY

Please enter your comment!
Please enter your name here