ಉಡುಪಿ, ಜ.1: ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬವರು ಡಿ.29ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, ಕುಂದಾಪುರ ವೃತ್ತ ನಿರೀಕ್ಷಕರು ದೂ.ಸಂಖ್ಯೆ : 08254- 230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820- 2526444ಅನ್ನು ಸಂಪರ್ಕಿಸಬಹುದು ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.