Home Uncategorized ಅಭಿಮಾನಿಗಳ ದುರಂತ ಸಾವು: ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ ನಟ ಯಶ್

ಅಭಿಮಾನಿಗಳ ದುರಂತ ಸಾವು: ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ ನಟ ಯಶ್

35
0

ಗದಗ: ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಮೂವರು ಯುವಕರ ಕುಟುಂಬಸ್ಥರನ್ನುನಟ ಯಶ್‌ ಭೇಟಿ ಮಾಡಿ  ಸಾಂತ್ವನ ಹೇಳಿದರು.

ಸೂರಣಗಿ ಗ್ರಾಮದ ಹನುಮಂತ ಹರಿಜನ(21), ಮುರಳಿ ನಡವಿನಮನಿ(20), ನವೀನ ಗಾಜಿ(19) ಮೃತ ಯುವಕರ ಮನೆಗಳಿಗೆ ಹೋಗಿ ಪೋಷಕರಿಗೆ ಧೈರ್ಯ ತುಂಬಿದರು.

ಸೂರಣಗಿ ಗ್ರಾಮಕ್ಕೆ ಯಶ್​ ಭೇಟಿ ಹಿನ್ನೆಲೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

ಏನಿದು ಘಟನೆ

ರವಿವಾರ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಸೂರಣಗಿ ಗ್ರಾಮದ ಹನುಮಂತ ಹರಿಜನ(21), ಮುರಳಿ ನಡವಿನಮನಿ(20), ನವೀನ ಗಾಜಿ(19) ಎಂಬ ಮೂವರು ಯುವಕರು ಮೃತ ಪಟ್ಟಿದ್ದರು.

ಸೂರಣಗಿ ಗ್ರಾಮದ 10ಕ್ಕೂ ಹೆಚ್ಚು ಯುವಕರು, ಗ್ರಾಮದ ಅಂಬೇಡ್ಕರ್ ಸರ್ಕಲ್ ನಲ್ಲಿ 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.

ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here