ರಾಮನಗರ: ಅಯೋಧ್ಯೆ (Ayodhya) ಮಾದರಿಯಲ್ಲೇ ರಾಮದೇವರ ಬೆಟ್ಟ ಕೂಡ ಅಭಿವೃದ್ಧಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್ ನಾರಾಯಣ (Ashwath Narayan) ಪತ್ರ ಬರೆದಿದ್ದಾರೆ.ರಾಮದೇವರ ಬೆಟ್ಟ ಮುಜರಾಯಿ ಇಲಾಖೆ ಅಧೀನದಲ್ಲಿದೆ. ಹೀಗಾಗಿ 19 ಎಕರೆ ಪ್ರದೇಶದಲ್ಲಿ ಅಯೋಧ್ಯೆಯ ರಾಮ ಮಂದಿರದಂತೆಯೇ, ರಾಮದೇವರ ಬೆಟ್ಟದಲ್ಲಿ ದೇವಸ್ಥಾನ ನಿರ್ಮಿಸಲು ತ್ವರಿತವಾಗಿ ಅಭಿವೃದ್ಧಿ ಸಮಿತಿ ರಚಿಸಬೇಕು ಎಂದು ಸಿಎಂ ಬೊಮ್ಮಾಯಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
