Home ಕರ್ನಾಟಕ ಅಶ್ಲೀಲ ವಿಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಕುಮಾರಸ್ವಾಮಿ

ಅಶ್ಲೀಲ ವಿಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಕುಮಾರಸ್ವಾಮಿ

3
0

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ “ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ; ಆದರೆ ಹೆಚ್ಚಿನ ಹೊಣೆಗಾರಿಕೆ ಇರುವುದು ಸರ್ಕಾರದ ಮೇಲೆ” ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಎಎನ್‍ಐ ವರದಿ ಮಾಡಿದೆ.

“ಕೇವಲ ಚಿಕ್ಕಪ್ಪನಾಗಿ ಮಾತ್ರವಲ್ಲದೇ ದೇಶದ ಜನಸಾಮಾನ್ಯನಾಗಿ ಕೂಡಾ ನಾವು ಮುನ್ನಡೆಯಬೇಕಾಗಿದೆ. ಇದು ನಾಚಿಕೆಗೇಡಿನ ಪ್ರಕರಣ. ನಾನು ಯಾರನ್ನೂ ರಕ್ಷಿಸುತ್ತಿಲ್ಲ. ಈ ಬಗೆಯ ಕಾನೂನುಬಾಹಿರ ಕೃತ್ಯಗಳ ವಿರುದ್ಧ ನಾವು ಹೋರಾಡುತ್ತಾ ಬಂದಿದ್ದೇವೆ. ಇದು ಗಂಭೀರ ಪ್ರಕರಣ. ಸರ್ಕಾರವನ್ನು ನಡೆಸುತ್ತಿರುವವರು ನೈಜ ಚಿತ್ರಣವನ್ನು ಬಹಿರಂಗಪಡಿಸಬೇಕು. ತಳಮಟ್ಟದ ವಾಸ್ತವತೆಯನ್ನು ಬಹಿರಂಗಪಡಿಸುವುದು ಸರ್ಕಾರದ ಕೆಲಸವೇ ವಿನಃ ನನ್ನದಲ್ಲ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here