ಬೆಂಗಳೂರು;- ಆಗಸ್ಟ್ನಲ್ಲಿ ಶೇ 73 ರಷ್ಟು ಮಳೆ ಕೊರತೆ ಆಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜೂನ್ನಲ್ಲಿ ಶೇ 56ರಷ್ಟು ಮಳೆ ಕೊರತೆ, ಜುಲೈನಲ್ಲಿ ಶೇ 29ರಷ್ಟು ಮಳೆ ಕೊರತೆ, ಆಗಸ್ಟ್ನಲ್ಲಿ ಶೇ 73 ರಷ್ಟು ಮಳೆ ಕೊರತೆ, ಸೆಪ್ಟೆಂಬರ್ನಲ್ಲಿ ಶೇ 26ರಷ್ಟು ಮಳೆ ಕೊರತೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಶೇ 63 ರಷ್ಟು ಮಳೆ ಕೊರತೆ ಆಗಿದೆ ಎಂದರು.
ಒಟ್ಟು 216 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಮೊದಲ ಸುತ್ತಿನಲ್ಲಿ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. 2ನೇ ಸುತ್ತಿನಲ್ಲಿ 21 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಪಶು ಸಂಗೋಪನೆ ಚಟುವಟಿಕೆಗಳಿಗೆ 355 ಕೋಟಿ ರೂ. ನೀಡಲು ಮನವಿ ಮಾಡಿದ್ದೇವೆ. ಡಿಸೆಂಬರ್ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಒಟ್ಟು 17901 ಕೋಟಿ ರೂ. ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಕೇಂದ್ರದ ಅಧಿಕಾರಿಗಳು ರಾಜ್ಯಕ್ಕೆ ಬಂದು ಅಧ್ಯಯನ ಕೂಡ ಮಾಡುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಕೇಂದ್ರದ ಅಧಿಕಾರಿಗಳ ತಂಡ ವರದಿ ಸಲ್ಲಿಸಬಹುದು. ಆದಷ್ಟು ಬೇಗ ಹಣ ಬಿಡುಗಡೆ ಆಗಬೇಕು ಅಂತಾ ಮನವಿ ಮಾಡಿದ್ದೇವೆ. ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದರು.
The post ಆಗಸ್ಟ್ನಲ್ಲಿ ಶೇ 73 ರಷ್ಟು ಮಳೆ ಕೊರತೆ – ಸಚಿವ ಕೃಷ್ಣ ಭೈರೇಗೌಡ appeared first on Ain Live News.