Home Uncategorized ಆ.1ರೊಳಗೆ ಅನ್ನಭಾಗ್ಯ ಯೋಜನೆ ಜಾರಿ: ರಾಜ್ಯ ಸರ್ಕಾರ

ಆ.1ರೊಳಗೆ ಅನ್ನಭಾಗ್ಯ ಯೋಜನೆ ಜಾರಿ: ರಾಜ್ಯ ಸರ್ಕಾರ

21
0

ಜುಲೈ 1 ರಂದು ರಾಜ್ಯ ಸರ್ಕಾರಕ್ಕೆ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಾಗದಿರಬಹುದು. ಆದರೆ, ಆ.1ರೊಳಗೆ ಯೋಜನೆ ಜಾರಿಗೆ ತರುತ್ತೇವೆಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ. ಬೆಂಗಳೂರು: ಜುಲೈ 1 ರಂದು ರಾಜ್ಯ ಸರ್ಕಾರಕ್ಕೆ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಾಗದಿರಬಹುದು. ಆದರೆ, ಆ.1ರೊಳಗೆ ಯೋಜನೆ ಜಾರಿಗೆ ತರುತ್ತೇವೆಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು, ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಜುಲೈ.1 ರಂದು ಯೋಜನೆ ಜಾರಿಗೆ ತರಲು ಸಾಧ್ಯವಾಗಲಿಲ್ಲ. ಆದರೆ, ಆಗಸ್ಟ್ 1ರೊಳಗೆ ಯೋಜನೆ ಜಾರಿಗೆ ತರುತ್ತೇವೆಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ನಿರಾಕರಿಸಿದ್ದರಿಂದ ಅಕ್ಕಿ ಸಂಗ್ರಹಿಸಲು ಸರ್ಕಾರ ಹೊಸ ಮಾರ್ಗವನ್ನು ಕಂಡುಕೊಕಂಡಿದೆ. ಅಕ್ಕಿ ನೀಡಲು ಪಂಜಾಬ್ ಮತ್ತು ಛತ್ತೀಸ್‌ಗಢ ಒಪ್ಪಿಗೆ ನೀಡಿದೆ. ಹೀಗಾಗಿ ಆ.1ರೊಳಗೆ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here