Home Uncategorized ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

20
0

ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಲಾಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ. ಶಿವಮೊಗ್ಗ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಲಾಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ.

ಕಳೆದ 6-7 ವರ್ಷಗಳ ಹಿಂದೆ ಅಯ್ಯಪ್ಪ ಮಾಲದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಸಂಕಲ್ಪ ತೊಟ್ಟಿದ್ದ ಆರಗ ಜ್ಞಾನೇಂದ್ರ ಅವರು, ಈ ವರ್ಷ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಇರುಮುಡಿ ಹೊತ್ತು ತೆರಳಿದ್ದಾರೆ.

ಹಲವು ಬಾರಿ ಹೋಗಲು ಪ್ರತ್ನಿಸಿದ್ದರೂ ಕೊನೇ ಕ್ಷಣದಲ್ಲಿ ಹೋಗಲು ಸಾಧ್ಯವಾಗಿರಲಿಲ್ಲ. ಈ ವರ್ಷ ಏನೇ ಕಾರ್ಯದೊತ್ತಡ ಇದ್ದರೂ ಸ್ವಾಮಿಯ ಸನ್ನಿದಾನಕ್ಕೆ ಭೇಟಿ ಕೊಡಲೇಬೇಕು ಎಂದು 15 ದಿನ ಹಿಂದೆ ನಿಶ್ಚಯಿಸಿದ್ದೆ. ಅದರಂತೆ, ಇಂದು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಇರುಮುಡಿಯನ್ನು ಹೊತ್ತು ತೆರಳಿದ್ದೇನೆಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಲಕ್ಷಾಂತರ ಹಿಂದೂಗಳ ಶ್ರದ್ಧಾ ಕೇಂದ್ರ, ಪವಿತ್ರ ಕ್ಷೇತ್ರ ಶಬರಿ ಮಲೆಗೆ ಭೇಟಿ ನೀಡುವ ನನ್ನ ಬಹುಕಾಲದ ಸಂಕಲ್ಪ ಈಗ ಸಾಕಾರವಾಗುತ್ತಿದೆ. ನಿನ್ನೆ ನನ್ನ ಕೆಲವು ಮಿತ್ರರೊಂದಿಗೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಇರುಮುಡಿಯೊಂದಿಗೆ ಪ್ರಯಾಣ ಬೆಳೆಸಲಾಯಿತು.

ಸ್ವಾಮಿಯೇ ಶರಣಂ ಅಯ್ಯಪ್ಪ! href=”https://twitter.com/BJP4Karnataka?ref_src=twsrc%5Etfw”>@BJP4Karnataka pic.twitter.com/0HJsbQX8KM
— Araga Jnanendra (@JnanendraAraga) January 17, 2023

ಅಯ್ಯಪ್ಪನ ಭಕ್ತನಾಗಿ ಅಯ್ಯಪ್ಪ ಸ್ವಾಮಿ ಭಕ್ತರ ಭಕ್ತಿಯಲ್ಲಿ ಕೈ ಜೊಡಿಸಬೇಕು ಎಂಬ ಅಭಿಲಾಷೆಯಿತ್ತು. ಅಯ್ಯಪ್ಪಸ್ವಾಮಿಯ ದರ್ಶನ ಮಾಡಲೇಬೇಕೆನ್ನುವ ಸಂಕಲ್ಪದೊಂದಿಗೆ ಭಕ್ತರ ಜೊತೆಗೆ ಅಯ್ಯಪ್ಪನ ದರ್ಶನ ಮಾಡಿದದ್ದೇನೆ. ಹಲವು ಬಾರಿ ಪ್ರಯತ್ನಿಸಿದ್ದರೂ ಕಾರಣಾಂತರಗಳಿಂದ ಕಾಲ ಕೂಡಿ ಬಂದಿರಲಿಲ್ಲ. ಕಳೆದ ಹದಿನೈದು ದಿನದ ಹಿಂದೆ ಶಬರಿಮಲೆಗೆ ಪಾದಯಾತ್ರೆ ಮುಗಿಸಿ ಬಂದವರು ಈ ಬಾರಿ ನಿಮ್ಮನ್ನು ಕರೆದುಕೊಂಡು ಬಂದೇ ಬರುತ್ತೇವೆ ಎಂದು ಶಪತ ಮಾಡಿ ಬಂದಿದ್ದೇವೆ ಹೊರಡಲೇಬೇಕು ಎಂದಿದ್ದರು. ಹಾಗಾಗಿ, ಅವರೊಂದಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here