Home Uncategorized ಇಸ್ರೊ ಗೂಢಚಾರಿಕೆ ಪ್ರಕರಣ: ಆರೋಪಿ ಅಧಿಕಾರಿಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಇಸ್ರೊ ಗೂಢಚಾರಿಕೆ ಪ್ರಕರಣ: ಆರೋಪಿ ಅಧಿಕಾರಿಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

30
0

ಇಸ್ರೊ ಗೂಢಚಾರಿಕೆ ಪ್ರಕರಣದಲ್ಲಿ ಮಾಜಿ ಉನ್ನತ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನಿನ ಕುರಿತ ಕೇರಳ ಹೈಕೋರ್ಟ್ ಆದೇಶವನ್ನು (Kerala HC) ಸುಪ್ರೀಂಕೋರ್ಟ್ (Supreme Court) ಶುಕ್ರವಾರ ರದ್ದುಗೊಳಿಸಿದೆ. 1994 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಾಜಿ ವಿಜ್ಞಾನಿ ನಂಬಿ ನಾರಾಯಣನ್ (Nambi Narayanan) ಗೂಢಾಚಾರಿಕೆ ನಡೆಸಿದ್ದರು ಎಂದು ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದ ಆರೋಪ ಹೊಂದಿರುವ ಆರೋಪಿಗಳ ನಿರೀಕ್ಷಣಾ ಜಾಮೀನನ್ನು ಇದೀಗ ಸುಪ್ರೀಂಕೋರ್ಟ್ ರದ್ದು ಮಾಡಿದೆ. ನಾಲ್ಕು ವಾರಗಳಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಕೇರಳ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಹೇಳಿದೆ. ಜಾಮೀನಿಗಾಗಿ ಹೈಕೋರ್ಟ್‌ಗೆ ತೆರಳಲು ಅಧಿಕಾರಿಗೆ ಅವಕಾಶ ನೀಡಲು ನ್ಯಾಯಾಲಯ ಐದು ವಾರಗಳ ಅವಧಿಗೆ ಬಂಧನದಿಂದ ರಕ್ಷಣೆ ನೀಡಿದೆ.

 

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

LEAVE A REPLY

Please enter your comment!
Please enter your name here