ಮಾಜಿ ಸಚಿವ, ಕೊಳ್ಳೇಗಾಲದ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು: ಮಾಜಿ ಸಚಿವ, ಕೊಳ್ಳೇಗಾಲದ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹೇಶ್ ಅವರಿಗೆ ಆ್ಯಂಜಿಯೋಗ್ರಾಮ್ ಮಾಡಲಾಗಿದೆ. ಮಹೇಶ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಅನಾಥ ಶವದಂತೆ ಅಂತ್ಯಕ್ರಿಯೆ: ದೆಹಲಿಯಲ್ಲಿ ಅಂಬೇಡ್ಕರ್ ಪಾರ್ಥೀವ ಶರೀರವನ್ನು ದಫನ್ ಮಾಡಲು ಕಾಂಗ್ರೆಸ್ ಬಿಡಲಿಲ್ಲ- ಎನ್ ಮಹೇಶ್
ಮಹೇಶ್ ಪುತ್ರರು ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ. ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.