ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ. ಬೆಂಗಳೂರು: ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ.
ಇದನ್ನೂ ಓದಿ: ಜಾನುವಾರು ವ್ಯಾಪಾರಿ ಹತ್ಯೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ?
ವಾಹನದೊಳಗಡೆ ವ್ಯಕ್ತಿಯೋರ್ವ ಅಳುತ್ತಿರುವ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ ಎಂದು ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ.
ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ.
ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ. pic.twitter.com/kN7PEIQjKP
— Karnataka Congress (@INCKarnataka) April 2, 2023
ಮತ್ತೊಂದು ಟ್ವೀಟ್ ನಲ್ಲಿ 40% ಕಮಿಷನ್ ಪಡೆದು ಆರಾಮಾಗಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ಸರ್ಕಾರ ಹೊಣೆಯಲ್ಲವೇ? ಎಂದು ಪ್ರಶ್ನಿಸಿದ್ದು, ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ ಎಂದು ತಾಕೀತು ಮಾಡಿದೆ.
40% ಕಮಿಷನ್ ಪಡೆದು ಆರಾಮಾಗಿರುವ @JnanendraAraga ಅವರೇ,
ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ?
ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ?
ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ. pic.twitter.com/1xhpBXRZHi
— Karnataka Congress (@INCKarnataka) April 2, 2023
ಪೊಲೀಸರು ಈ ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು. 3/4#LawAndOrder
— Siddaramaiah (@siddaramaiah) April 2, 2023
ಜಾನುವಾರು ಸಾಗಣೆ ವಾಹನದ ಚಾಲಕನನ್ನು ಕೊಲೆಗೈದ ಪುಡಾರಿ ಬಿಜೆಪಿ ನಾಯಕರೊಂದಿಗೆ ಖಾಸಾ ಸಂಬಂಧ ಹೊಂದಿದ್ದಾನೆ.
ಚುನಾವಣೆಯ ಹಿನ್ನೆಲೆಯಲ್ಲಿ ಗಲಭೆ ಎಬ್ಬಿಸಲು ಈ ಕೊಲೆಗೆ @BJP4Karnataka ನಾಯಕರೇ ಸುಪಾರಿ ನೀಡಿದ್ದರೇ?
ಇದು ಬಿಜೆಪಿ ಪ್ರಾಯೋಜಿತ ಕೊಲೆಯೇ?
ಪೋಲಿಸರು ಆತನೊಂದಿಗೆ ನಿಕಟ ಸಂಬಂಧವಿರುವ ಬಿಜೆಪಿ ನಾಯಕರನ್ನೂ ವಿಚಾರಣೆಗೆ ಒಳಪಡಿಸಬೇಕು. pic.twitter.com/kXo4j6MbMs
— Karnataka Congress (@INCKarnataka) April 2, 2023