Home Uncategorized ಕಲಬುರಗಿಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗ, ಕುಖ್ಯಾತ ರೌಡಿ ಬಂಧಿಸಿ ಜೈಲಿಗೆ...

ಕಲಬುರಗಿಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗ, ಕುಖ್ಯಾತ ರೌಡಿ ಬಂಧಿಸಿ ಜೈಲಿಗೆ ಕಳಿಸಿದ ಖಾಕಿ

24
0

ಕಲಬುರಗಿ: ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ತಡೆಗೆ ಗೂಂಡಾ ಕಾಯ್ದೆ ಅಸ್ತ್ರ(Goonda Act) ಪ್ರಯೋಗಿಸಲಾಗಿದೆ. ಕುಖ್ಯಾತ ರೌಡಿ ಸೈಯದ್​ ಆದೀಲ್​​ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಾಗಿದ್ದು ಸೈಯದ್ ಬಂಧಿಸಿ ಬೆಳಗಾವಿ ಜೈಲಿಗೆ ಕಳಿಸುವಂತೆ ಕಲಬುರಗಿ ನಗರ ಪೊಲೀಸ್ ಕಮಿಷನರ್​ ಡಾ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕಲಬುರಗಿಯ ವಿದ್ಯಾನಗರದ ನಿವಾಸಿಯಾಗಿರುವ ರೌಡಿ ಸೈಯದ್ ಆದೀಲ್​ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ಹಲವು ಕೇಸ್ ದಾಖಲಾಗಿದ್ದವು.

ಮೈಸೂರಿನ ರೌಡಿಶೀಟರ್ RX ಮನು ಗಡಿಪಾರು

ಇನ್ನು ಮೈಸೂರಿನಲ್ಲಿ ರೌಡಿ ಶೀಟರ್‌ಗಳ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಮೈಸೂರಿನ ಬನ್ನಿಮಂಟಪ ಹುಡ್ಕೋ ಬಡಾವಣೆಯ ನಿವಾಸಿ ಮನೋಜ್ ಕುಮಾರ್ ಅಲಿಯಾಸ್ RX ಮನು ಗಡಿ ಪಾರು ಮಾಡಲಾಗಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ ಹಿನ್ನಲೆ ಮೈಸೂರು ನಗರ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಗುಂಟಿ ಒಂದು ತಿಂಗಳ ಕಾಲ ಮನು ಗಡಿಪಾರು ಮಾಡಿ ಆದೇಶಿಸಿದ್ದಾರೆ. ಮೈಸೂರಿನ ನರಸಿಂಹರಾಜ, ಲಷ್ಕರ್, ವಿಜಯನಗರ, ಮಂಡಿ, ಲಕ್ಷ್ಮಿಪುರಂ, ಜಯಲಕ್ಷ್ಮಿ ಪುರಂ, ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ದ ಹಲವು ಪ್ರಕರಣ
ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಇಂದು ಕೋಲಾರ, ಹಾಸನ ಬಂದ್; ಚಿನ್ನದ ನಾಡಲ್ಲಿ ಖಾಸಗಿ ಶಾಲೆಗಳಿಗೆ ರಜೆ

ಮೈಸೂರಿನಲ್ಲಿ ಮುಂದುವರಿದ ವಾಹನಗಳ ತಪಾಸಣಾ ಅಭಿಯಾನ

ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಗಳು ಹೆಚ್ಚಾಗುತ್ತಿವೆ.ಸದ್ಯ ವಾಹನಗಳಲ್ಲಿ ಮಾರಕಾಸ್ತ್ರಗಳು ಇಟ್ಟಿರುವ ಬಗ್ಗೆ ಮೈಸೂರಿನಲ್ಲಿ ತಪಾಸಣೆ ಮುಂದುವರೆದಿದೆ. ನಗರಕ್ಕೆ ಆಗಮಿಸುವ ವಾಹನಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೈಸೂರು ಪೊಲೀಸ್ ಕಮಿಷನರ್​ ರಮೇಶ್ ಸೂಚನೆ ಮೇರೆಗೆ ಜನರ ಸುರಕ್ಷತೆ, ಹಿತದೃಷ್ಟಿಯಿಂದ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here