Home Uncategorized ಕಲಬುರಗಿ | ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ: ಐದನೇ ಆರೋಪಿಯ ಬಂಧನ

ಕಲಬುರಗಿ | ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ: ಐದನೇ ಆರೋಪಿಯ ಬಂಧನ

24
0

ಕಲಬುರಗಿ: ಇಲ್ಲಿನ ಕೋಟನೂರ್ (ಡಿ) ಗ್ರಾಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಐದನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋಟನೂರ್ (ಡಿ) ಗ್ರಾಮದ ಪ್ರಶಾಂತ್ ಮಾಲಿ ಪಾಟೀಲ್ ಎಂಬ ಐದನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಲಬುರಗಿ ವಿಶ್ವ ವಿದ್ಯಾಲಯದ ಪೊಲೀಸರು ತಿಳಿಸಿದ್ದು, ಬಂಧಿತ ಆರೋಪಿ ಗ್ರಾಮದ ದನಕರುಗಳು ಮೇಯಿಸುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಅಂಬೇಡ್ಕರ್ ಮೂರ್ತಿಗೆ ಅವಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ರವಿವಾರ ಐದನೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ವಿಶ್ವ ವಿದ್ಯಾಲಯ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here