ಬಾಗಲಕೋಟೆಯ ಹುನುಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಜಗಳ ತಾರಕಕ್ಕೇರಿದೆ. ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಇತ್ತೀಚಿಗೆ ಸಾರ್ವಜನಿಕ ಸಭೆಯೊಂದರಲ್ಲಿ ಇಳಕಲ್ ತಹಸೀಲ್ದಾರ್ (tahsildar) ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದರು. ಇದೇ ಹಿನ್ನೆಲೆಯಲ್ಲಿ ತಹಸಿಲ್ದಾರ್ ಇಳಕಲ್ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆಯ ದೂರು ನೀಡಿದ ಬಳಿಕ ಕಾಂಗ್ರೆಸ್ ಧುರೀಣ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಶಾಸಕರ ಜೊತೆಗೆ ಇನ್ನೂ 26 ಕಾರ್ಯಕರ್ತರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ