ಬೆಂಗಳೂರು: ಜೆಡಿಎಸ್ ಪಕ್ಷ ತೊರೆದ ಮಾಜಿ ಶಾಸಕ ವೈಎಸ್ವಿ ದತ್ತ. ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಈ ಬಗ್ಗೆ ದತ್ತ ಅವರೇ ಸ್ಪಷ್ಟಪಡಿಸಿದ್ದು, ಈಗಾಗಲೇ ಸಿದ್ದರಾಮಯ್ಯ ಮತ್ತು ಡಿಕೆಶಿ ಭೇಟಿಯಾಗಿ ಚರ್ಚೆಯಾಗಿದ್ದೇನೆ. ಹಲವು ಬಾರಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾಗಿ ಮಾತಾಡಿರುವೆ. ವಿಧಾನಸಭಾ ಕ್ಷೇತ್ರದ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೇ ಈ ತೀರ್ಮಾನವನ್ನು ದೇವೇಗೌಡ ಹತ್ತಿರ ಹೇಳಿಕೊಳ್ಳಲಾಗದೇ ತೊಳಲಾಟಕ್ಕೆ ಸಿಕ್ಕು ಭೇಟಿ ಮಾಡುವುದಕ್ಕೂ ಆಗಿಲ್ಲ. ಆದ್ರೆ, ಅನಿವಾರ್ಯತೆಯಲ್ಲಿ ತೀರ್ಮಾನ ಮಾಡಿದ್ದೇನೆ ಎಂದರು. ಇನ್ನು ಕಾಂಗ್ರೆಸ್ ಸೇರ್ಪಡೆಯಾಗಲು ಎರಡು ಕಾರಣಗಳನ್ನು ಸಹ ಕೊಟ್ಟರು.