Home Uncategorized ಕುಂದಾಪುರ ರೈಲು ನಿಲ್ದಾಣಕ್ಕೆ ವಿವಿಧ ಕೊಡುಗೆಗಳ ಉದ್ಘಾಟನೆ

ಕುಂದಾಪುರ ರೈಲು ನಿಲ್ದಾಣಕ್ಕೆ ವಿವಿಧ ಕೊಡುಗೆಗಳ ಉದ್ಘಾಟನೆ

17
0

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ದಾನಿಗಳು ಕೊಡಮಾಡಿದ ಪ್ರಯಾಣಿಕರ ತಂಗುದಾಣ (ಶೆಲ್ಟರ್) ಸಹಿತ ವಿವಿಧ ಕೊಡುಗೆಗಳ ಉದ್ಘಾಟನೆ ಶುಕ್ರವಾರ ಸಂಜೆ ನಡೆಯಿತು.

ಶ್ರೀರಾಮ್ ಗ್ರಾನೈಟ್ಸ್ ಕೊಡಮಾಡಿದ ಪ್ರಯಾಣಿಕರಶೆಲ್ಟರ್ ಉದ್ಘಾಟಿಸಿದ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ಆಸಕ್ತಿ ವಹಿಸಿ ದಾನಿಗಳ ಮೂಲಕ ನಿಲ್ದಾಣಕ್ಕೆ ಅಗತ್ಯ ಸೌಕರ್ಯಗಳನ್ನು ಒದಗಿಸಿರುವುದು ಶ್ಲಾಘನೀಯ. ದಾನಿಗಳಿಂದ ಮಾತ್ರ ವಲ್ಲದೆ ಸರಕಾರದಿಂದಲೂ ಈ ನಿಲ್ದಾಣವನ್ನು ಉತ್ತಮವಾಗಿಸಲು ಸಚಿವರಲ್ಲಿಯೂ ಮನವಿ ಸಲ್ಲಿಸಲಾಗುವುದು ಎಂದರು.

ನಿಲ್ದಾಣಕ್ಕೆ ಡಿಜಿಟಲ್ ನಾಮಫಲಕದ ಕೊಡುಗೆ ನೀಡಿದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ರೈಲು ನಿಲ್ದಾಣ ಅತ್ಯಂತ ಚೊಕ್ಕಟವಾಗಿರಬೇಕು. ಫ್ಲಾಟ್‌ಫಾರ್ಮ್‌ಗಳು ಹಿರಿಯರಿಗೂ ಅನುಕೂಲವಾಗು ವಂತಿರಬೇಕು. ನಮ್ಮ ಊರು ಚೆಂದ ಇರಬೇಕಾದರೆ, ರೈಲು ನಿಲ್ದಾಣಗಳು ಉತ್ತಮವಾಗಿರಬೇಕು. ಅದಕ್ಕಾಗಿ ಹಿತರಕ್ಷಣಾ ಸಮಿತಿ ಶ್ರಮ ಅಭಿನಂದನಾರ್ಹ ಎಂದರು.

ದೇಶದ 100 ಕಡೆಗಳಿಂದ ಅಯೋಧ್ಯೆಗೆ ರೈಲು ಸಂಚಾರ ಆರಂಭ ಗೊಳ್ಳಲಿದ್ದು, ಕರಾವಳಿಯಿಂದಲೂ ಆರಂಭಿಸಬೇಕು ಎನ್ನುವುದು ನಮ್ಮ ಬೇಡಿಕೆ. ಪೇಜಾವರಶ್ರೀಗಳ ಸಹಕಾರದೊಂದಿಗೆ, ಸಂಸದರು, ಶಾಸಕರ ಪ್ರಯತ್ನವೂ ಬೇಕಾಗಿದೆ. ಅಮೃತ್ ಭಾರತ್ ಯೋಜನೆಯಡಿ ಇಲ್ಲಿನ ನಿಲ್ದಾಣಗಳು ಅಭಿವೃದ್ಧಿಯಾಗಲಿ ಎಂದು ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್ ಒತ್ತಾಯಿಸಿದರು.

ಕೊಂಕಣ್ ರೈಲ್ವೆಯ ಸಹಾಯಕ ಸಂಚಾರಿ ಪ್ರಬಂಧಕ ವಿನಯ್, ದಾನಿಗಳಾದ ಕೋಜುರಾಮ್ ದೇವಸಿಯಾ, ನೇಸರ ಸೈನ್ ಕ್ರಿಯೇಟರ್ಸ್ ಬೆಂಗಳೂರಿನ ಬಿ.ಎನ್.ನರಸಿಂಹ ಬೀಜಾಡಿ, ರೆಡ್‌ಕ್ರಾಸ್‌ನ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಕುಂದಾಪುರ ರೈಲ್ವೆ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆಂಚ ನೂರು ಸೋಮಶೇಖರ ಶೆಟ್ಟಿ, ಕಾರ್ಯದರ್ಶಿ ಪ್ರವೀಣ್ ಕುಮಾರ್, ಉಪಾಧ್ಯಕ್ಷ ರಾಜೇಶ ಕಾವೇರಿ, ಲಯನ್ಸ್ ಪ್ರಾದೇಶಿಕ ಅಧ್ಯಕ್ಷ ಏಕನಾಥ್ ಬೋಳಾರ್ ಮುಂತಾದವರು ಉಪಸ್ಥಿತರಿದ್ದರು.

“ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ಹಿತರಕ್ಷಣಾ ಸಮಿತಿ ಹಾಗೂ ದಾನಿಗಳ ಸಹಕಾರದಿಂದ ಕುಂದಾಪುರ ನಿಲ್ದಾಣ ಅಭಿವೃದ್ಧಿಯಾಗುತ್ತಿದೆ. ಇನ್ನಷ್ಟು ಪ್ರಯಾಣಿಕರ ಶೆಲ್ಟರ್‌ನ ಅಗತ್ಯವಿದೆ. ಈ ನಿಲ್ದಾಣಕ್ಕೆ ಅಮೃತ್ ಭಾರತ್ ಯೋಜನೆ ಜಾರಿ ಹಾಗೂ ಕುಂದಾಪುರದಲ್ಲಿ ವಂದೇ ಭಾರತ್ ರೈಲು ನಿಲುಗಡೆ ಬಗ್ಗೆ ರೈಲ್ವೇ ಮಂಡಳಿ ತೀರ್ಮಾನಕೈಗೊಳ್ಳಲಿದೆ”.

-ಸುಧಾ ಕೃಷ್ಣಮೂರ್ತಿ, ಕೊಂಕಣ್ ರೈಲ್ವೆಯ ಪಿಆರ್‌ಓ ಮಂಗಳೂರು

LEAVE A REPLY

Please enter your comment!
Please enter your name here