Home Uncategorized ಕುತೂಹಲ ಮೂಡಿಸಿದ ಜೆಡಿಎಸ್ ಟಿಕೆಟ್ ಆಕಾಂಕ್ಷಿ­-ರೇವಣ್ಣ ಭೇಟಿ

ಕುತೂಹಲ ಮೂಡಿಸಿದ ಜೆಡಿಎಸ್ ಟಿಕೆಟ್ ಆಕಾಂಕ್ಷಿ­-ರೇವಣ್ಣ ಭೇಟಿ

63
0

ಅಚ್ಚರಿಯ ಬೆಳವಣಿಗೆಯಲ್ಲಿ ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಮಾಜಿ ಸಚಿವ, ಜೆಡಿಎಸ್ ನಾಯಕ ರೇವಣ್ಣ ಅವರನ್ನು ಭೇಟಿ ಮಾಡಿದ್ದಾರೆ.  ಹಾಸನ: ಅಚ್ಚರಿಯ ಬೆಳವಣಿಗೆಯಲ್ಲಿ ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಮಾಜಿ ಸಚಿವ, ಜೆಡಿಎಸ್ ನಾಯಕ ರೇವಣ್ಣ ಅವರನ್ನು ಭೇಟಿ ಮಾಡಿದ್ದಾರೆ. 

ಹಾಸನದ ಲೋಕಸಭಾ ಸದಸ್ಯರ ಅಧಿಕೃತ ಕ್ವಾರ್ಟರ್ಸ್ ನಲ್ಲಿ ಸ್ವರೂಪ್ ರೇವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

ಒಂದೂ ವರೆ ತಿಂಗಳ ಬಳಿಕ ಸ್ವರೂಪ್ ಜೆಡಿಎಸ್ ನಾಯಕರನ್ನು ಭೇಟಿ ಮಾಡಿದ್ದು, ಉಭಯ ನಾಯಕರ ನಡುವೆ ಟಿಕೆಟ್ ವಿಷಯವಾಗಿ ಜಟಾಪಟಿ ನಡೆದಿತ್ತು.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎರಡು ಬಾರಿ ಸ್ವರೂಪ್ ಗೆ ಬಹಿರಂಗವಾಗಿ ಭರವಸೆ ನೀಡಿದ್ದ ನಂತರ ಭವಾನಿ ರೇವಣ್ಣ ಹಾಗೂ ಸ್ವರೂಪ್ ಪ್ರತ್ಯೇಕವಾಗಿ ಪ್ರಚಾರ ನಡೆಸಿದ್ದರು. ಆಗಿನಿಂದ ಹೆಚ್ ಡಿ ರೇವಣ್ಣ ಹಾಗೂ ಹೆಚ್ ಪಿ ಸ್ವರೂಪ್ ಅಂತರ ಕಾಯ್ದುಕೊಂಡಿದ್ದರು. 

ಇನ್ನು ಸ್ವರೂಪ್ ಹೆಚ್ ಡಿ ರೇವಣ್ಣ ಅವರೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂಬ ಊಹಾಪೋಹಗಳೂ ಎದುರಾಗಿತ್ತು. ಈಗ ಸುಮಾರು 20 ನಿಮಿಷಗಳಿಗೂ ಹೆಚ್ಚಿನ ಕಾಲ ಸ್ವರೂಪ್ ಹಾಗೂ ರೇವಣ್ಣ ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ. ಚರ್ಚೆ ವೇಳೆ ಪಂಚರತ್ನ ಯಾತ್ರೆ ಬಗ್ಗೆ ಮಾತ್ರ ಮಾತನಾಡಿದ್ದೇವೆ ರಾಜಕೀಯ ಮಾತನಾಡಿಲ್ಲ ಎಂದು ಸ್ವರೂಪ್ ಹೇಳಿದ್ದಾರೆ.

ಟಿಕೆಟ್ ವಿಷಯವನ್ನು ನಾಯಕರು ಪಂಚರತ್ನ ಯಾತ್ರೆ ಬಳಿಕ ಚರ್ಚಿಸಲ್ಪಿದ್ದಾರೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳದಂತೆ ಸ್ವರೂಪ್ ಗೆ ರೇವಣ್ಣ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. 

LEAVE A REPLY

Please enter your comment!
Please enter your name here