Home Uncategorized ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

7
0

ಬೆಂಗಳೂರು: “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,“ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ” ಎಂದು ಹೇಳಿದರು.

 ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ

“ ಮಂಡ್ಯದಲ್ಲಿ ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ನಮ್ಮ ಭಾಗದ ಎಲ್ಲಾ ಜಾತಿ ಹಾಗೂ ಧರ್ಮದ ಜನರು ಬಹಳ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದರು. ನಮ್ಮ ಕಡೆ ಊರ ಹಬ್ಬ ಮಾಡುವಾಗ ಯಾವರೀತಿ ಮಾಡುತ್ತಾರೆ ಎಂದು ನೀವು ನೋಡಿದ್ದೀರಲ್ಲಾ? ಈಗ ಅವರು ಹೊಸ ಪ್ರಯೋಗ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ಪಂಚಾಯ್ತಿಯವರು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಮಾತ್ರ ಹಾರಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ರಾಷ್ಟ್ರ ಧ್ವಜ ಹಾಗೂ ಕನ್ನಡ ಬಾವುಟಕ್ಕೆ ಗೌರವ ನೀಡಬೇಕು. ಕನ್ನಡದಲ್ಲೇ ನಾಮಫಲಕ ಇರಬೇಕು ಎಂದೂ ನಾವು ಕಾನೂನು ಮಾಡಿದ್ದೇವೆ. ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಹುದಾಗಿತ್ತು, ಆದರೆ ಅವರು ವಿಧಾನ ಮಂಡಲ ಅಧಿವೇಶನದಲ್ಲೇ ಜಾರಿ ಮಾಡಲು ಹೇಳಿದ್ದಾರೆ. ರಾಷ್ಟ್ರ ಧ್ವಜ, ಸಂವಿಧಾನಕ್ಕೆ ಏನು ಗೌರವ ನೀಡಬೇಕೋ ಆ ಗೌರವ ನೀಡುವುದು ನಮ್ಮ ಬದ್ಧತೆ. ಜನ ಎಲ್ಲವನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ” ಎಂದು ತಿಳಿಸಿದರು.

ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ?

ಬಿಜೆಪಿಯವರು ಮನೆ, ಮನೆಗೆ ಹನುಮಧ್ವಜ ಹಂಚುವ ಬಗ್ಗೆ ಕೇಳಿದಾಗ, “ಬೇಡ ಎಂದು ಹೇಳಿದವರು ಯಾರು? ಬಿಜೆಪಿಯವರು ಹರ್ ಘರ್ ತಿರಂಗಾ ಎಂದು ಪ್ರಚಾರ ಮಾಡಿದ್ದರು. ಈಗ ಆ ತಿರಂಗಾವನ್ನು ಯಾಕೆ ಮರೆತಿದ್ದಾರೆ? ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ತಿರಂಗಾ ಬದಲಿಗೆ ಕೇಸರಿ ಧ್ವಜವನ್ನೇ ಕಾನೂನು ಮೂಲಕ ತರಲಿ, ಬೇಡ ಎಂದವರು ಯಾರು?” ಎಂದು ಛೇಡಿಸಿದರು.

LEAVE A REPLY

Please enter your comment!
Please enter your name here