ಹೊಸದಿಲ್ಲಿ: ಭಾರತದ ಕುಸ್ತಿ ಫೆಡರೇಷನ್ನ ಕಾರ್ಯನಿರ್ವಹಣೆಯನ್ನು ನೋಡಿಕೊಳ್ಳಲು ಭಾರತೀಯ ಒಲಿಂಪಿಕ್ ಸಂಘವು ತಾತ್ಕಾಲಿಕ ಸಮಿತಿಯನ್ನು ರಚಿಸಿದೆ. ಫೆಡರೇಷನ್ನ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿದ ನಂತರದ ಬೆಳವಣಿಗೆ ಇದಾಗಿದೆ.
ಈ ತಾತ್ಕಾಲಿಕ ಸಮಿತಿಯ ನೇತೃತ್ವವನ್ನು ಭೂಪೀಂದರ್ ಸಿಂಗ್ ಬಜ್ವಾ ವಹಿಸಲಿದ್ದು ಸಮಿತಿಯ ಸದಸ್ಯರಾಗಿ ಎಂ ಎಂ ಸೋಮಯ ಮತ್ತು ಮಂಜೂಷ ಕನ್ವರ್ ಕಾರ್ಯನಿರ್ವಹಿಸಲಿದ್ದಾರೆ.
ನ್ಯಾಯಪರವಾಗಿ, ಹೊಣೆಗಾರಿಕೆಯಿಂದ ಹಾಗೂ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಭಾರತೀಯ ಒಲಿಂಪಿಕ್ ಸಂಘ ಹೇಳಿದೆ.
ಹಿಂದಿನ ಫೆಡರೇಷನ್ ಅಧ್ಯಕ್ಷ, ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತನೆಂದೇ ತಿಳಿಯಲಾದ ಸಂಜಯ್ ಸಿಂಗ್ ಇತ್ತೀಚೆಗೆ ಫೆಡರೇಷನ್ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಕುಸ್ತಿಪಟುಗಳು ತಮ್ಮ ವಿರೋಧ ವ್ಯಕ್ತಪಡಿಸಿದ್ದರು.