Home Uncategorized ಕೆಕೆಆರ್ ಟಿಸಿ ಸಿಬ್ಬಂದಿಗೆ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿ

ಕೆಕೆಆರ್ ಟಿಸಿ ಸಿಬ್ಬಂದಿಗೆ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿ

37
0

ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್ ಟಿಸಿ) ಸಿಬ್ಬಂದಿಗಾಗಿ ಪ್ರೀಮಿಯಂ‌ ರಹಿತ 1.20 ಕೋಟಿ ರೂ.ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಿದೆ.

ಗುರುವಾರ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಿಗಮದ ಸಿಬ್ಬಂದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ, ಕರ್ತವ್ಯನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗ ನ್ಯೂನತೆಗೆ ಒಳಗಾದಲ್ಲಿ ಸಿಬ್ಬಂದಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಿದೆ ಎಂದರು.

ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ 1.20 ಕೋಟಿ ರೂ.ಅಪಘಾತ ವಿಮೆ ಹಣ ದೊರಕಲಿದೆ. ನೌಕರರು ಶಾಶ್ವತ ಅಂಗನ್ಯೂನತೆ, ಭಾಗಶಃ ಶಾಶ್ವತ ಅಂಗನ್ಯೂನತೆಗೆ ಒಳಗಾದಲ್ಲಿ 1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್‍ಕಾರ್ಡ್ ಮೇಲೆ 15 ಲಕ್ಷ ರೂ., ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here