ಮಂಗಳೂರು: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದ.ಕ.ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿಯ ಸದಸ್ಯರನ್ನಾಗಿ ಹಮೀದ್ ಕಿನ್ಯ ಅವರನ್ನು ಸರಕಾರ ನೇಮಿಸಿದೆ.
ಸ್ಪೀಕರ್ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ರ ಶಿಫಾರಸಿನ ಮೇರೆಗೆ ನೇಮಕ ಮಾಡಲಾಗಿದೆ.
ಹಮೀದ್ ಕಿನ್ಯ ಅವರು ಕಿನ್ಯ ಗ್ರಾಪಂ ಸದಸ್ಯ, ಉಪಾಧ್ಯಕ್ಷ, ಅಧ್ಯಕ್ಷರಾಗಿ ಮತ್ತು ಮಂಗಳೂರು ತಾಲೂಕು ಗ್ರಾಪಂ ಸಂಘಟ ನೆಯ ಅಧ್ಯಕ್ಷ, ಉಪಾಧ್ಯಕ್ಷರ ಒಕ್ಕೂಟ ಅಧ್ಯಕ್ಷರಾಗಿ, ಕಿನ್ಯ ಕೇಂದ್ರ ಜಮಾತ್ ಕಮಿಟಿಯ ಜೊತೆ ಕಾರ್ಯದರ್ಶಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.