ಹೊಸದಿಲ್ಲಿ : ಭಾರತದ ಮಾಜಿ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದ ಅಗ್ರ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ಹಿಂದಿರುಗಿಸುತ್ತೇನೆ ಎಂದು ಘೋಷಿಸಿದ್ದಾರೆ.
ಕುಸ್ತಿ ಫೆಡರೇಶನ್ ಗೆ ನೂತನ ಚುನಾವಣೆ ನಡೆದ ಬಳಿಕ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಿಂಬಾಲಕರು ಚುನಾವಣೆಯಲ್ಲಿ ಗೆದ್ದಿದ್ದರು. ಆ ಬಳಿಕ ಸಾಕ್ಷಿ ಮಲಿಕ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಭಜರಂಗ್ ಪೂನಿಯಾ ಅವರ ಪದ್ಮಶ್ರೀಯನ್ನು ಹಿಂದಿರುಗಿಸಿದ್ದರು. ಈಗ ಪ್ರತಿಭಟನೆಯ ಭಾಗವಾಗಿದ್ದ ವಿನೇಶ್ ಫೋಗಟ್ ತಾನು ಪಡೆದಿರುವ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತೇನೆ ಎಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ ಎಂದು NDTV ವರದಿ ಮಾಡಿದೆ.