Home Uncategorized ಘಾಟಿ ಸುಬ್ರಹ್ಮಣ್ಯ ಸಹಿತ ಮೂರು ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳಿಗೆ ಅಂಗೀಕಾರ

ಘಾಟಿ ಸುಬ್ರಹ್ಮಣ್ಯ ಸಹಿತ ಮೂರು ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳಿಗೆ ಅಂಗೀಕಾರ

40
0

ಬೆಂಗಳೂರು : ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳು ಪರಿಷತ್‌ನಲ್ಲಿ ಬಿಜೆಪಿ ಸದಸ್ಯರ ಧರಣಿ ಗದ್ದಲದ ನಡುವೆಗೆ ಬುಧವಾರ ಅಂಗೀಕಾರಗೊಂಡವು.

ವಿಧಾನಸೌಧದಲ್ಲಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ನಡುವೆಯೇ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಧೇಯಕಗಳನ್ನು ಮಂಡಿಸುವಂತೆ ಸೂಚಿಸಿದರು. ಸಚಿವರು ಮಂಡಿಸಿದ ಧಾರ್ಮಿಕ ದತ್ತಿ ಇಲಾಖೆಯ ಮೂರು ವಿಧೇಯಕಗಳನ್ನು ಸಭಾಪತಿ ಸದನದಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

LEAVE A REPLY

Please enter your comment!
Please enter your name here