ಚಾಮರಾಜನಗರ: ಜಲ್ಲಿಪಾಳ್ಯ ದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನ ಟಯರ್ ಪಂಕ್ಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ಬೆಳಗ್ಗೆ ಹನೂರು ತಾಲ್ಲೂಕಿನ ವಡಕೆಹಳ್ಳದ ಬಳಿ ನಡೆದಿದೆ.
ಅಪಘಾತದಿಂದ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.