Home ಕರ್ನಾಟಕ ಚಿಕ್ಕಮಗಳೂರು | 30 ಮಂಗಗಳ ದಾರುಣ ಹತ್ಯೆ : ವ್ಯಾಪಕ ಆಕ್ರೋಶ

ಚಿಕ್ಕಮಗಳೂರು | 30 ಮಂಗಗಳ ದಾರುಣ ಹತ್ಯೆ : ವ್ಯಾಪಕ ಆಕ್ರೋಶ

26
0

ಚಿಕ್ಕಮಗಳೂರು : ಬಾಳೆ ಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧವಿಟ್ಟು 30 ಮಂಗಳನ್ನು ಕೊಂದು ರಸ್ತೆ ಬದಿಯಲ್ಲಿ ಎಸೆದಿರುವ ಧಾರುಣ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲೂಕು ದ್ಯಾವಣ ಗ್ರಾಮದ ಬಳಿ ನಡೆದಿದೆ. ಹೀನ ಕೃತ್ಯವನ್ನು ಪ್ರಾಣಿಪ್ರಿಯರು ಖಂಡಿಸಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬಾಳೆ ಹಣ್ಣಿನಲ್ಲಿ ಪ್ರಜ್ಷೆತಪ್ಪುವ ಔಷಧವಿಟ್ಟು ಮಂಗಗಳ ಪ್ರಜ್ಞೆತಪ್ಪಿಸಿರುವ ಕಿಡಿಗೇಡಿಗಳು ಬಳಿಕ ಮಂಗಗಳ ತಲೆಗೆ ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ. ಹೀಗೆ 30 ಮಂಗಗಳನ್ನು ಕೊಂದಿರುವ ದುಷ್ಕರ್ಮಿಗಳು ಮಂಗಗಳ ಕಳೇಬರಗಳನ್ನು ರಸ್ತೆ ಬದಿ ಎಸೆದು ಹೋಗಿದ್ದಾರೆ. ಮಂಗಗಳು ಸಾವನಪ್ಪಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು

16 ಗಂಡು ಮಂಗಗಳು, ಹದಿನಾಲ್ಕು ಹೆಣ್ಣುಮಂಗಗಳು, ನಾಲ್ಕು ಮರಿಮಂಗಗಳೂ ಸೇರಿದಂತೆ ಒಟ್ಟು 30 ಮಂಗಗಳನ್ನು ಕೊಂದು ಹಾಕಲಾಗಿದ್ದು, ಯಾವ ಕಾರಣಕ್ಕಾಗಿ ಮಂಗಗಳನ್ನು ಸಾಯಿಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಕಾಡು ಪ್ರಾಣಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆಗೆ ಜಿಲ್ಲಾದ್ಯಂತ ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ. ಮಂಗಗಳನ್ನು ಕೊಂದಿರುವ ಆರೋಪಿಗಳ ಪತ್ತೆಗೆ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here