Home ಕರ್ನಾಟಕ ಚಿತ್ರದುರ್ಗ: ಲಾರಿಗೆ ಕಾರು ಢಿಕ್ಕಿ; ಮಗು ಸಹಿತ ನಾಲ್ವರು ಮೃತ್ಯು

ಚಿತ್ರದುರ್ಗ: ಲಾರಿಗೆ ಕಾರು ಢಿಕ್ಕಿ; ಮಗು ಸಹಿತ ನಾಲ್ವರು ಮೃತ್ಯು

19
0

ಚಿತ್ರದುರ್ಗ, ಜೂನ್​ 15: ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ  ಚಿಕ್ಕಬೆನ್ನೂರು ಗ್ರಾಮದ ಬಳಿ  ನಡೆದಿದೆ.

ಮೃತರನ್ನು ಬೆಂಗಳೂರಿನ ತಣಸಂದ್ರ ಮೂಲದ ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. 

ಕಾರಿಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

LEAVE A REPLY

Please enter your comment!
Please enter your name here