
ಚುನಾವಣೆ ಪ್ರಚಾರದ ವೇಳೆ ಸೋನಿಯಾ ಗಾಂಧಿ ಆ ಪದ ಬಳಸಿಲ್ಲ: ಕಾಂಗ್ರೆಸ್ ಸ್ಪಷ್ಟೀಕರಣ
ಬೆಂಗಳೂರು:
ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ “ಸಾರ್ವಭೌಮತ್ವ” ಎಂಬ ಪದವನ್ನು ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಸ್ಪಷ್ಟಪಡಿಸಿದೆ ಮತ್ತು “ತಪ್ಪಾಗಿ” ಆ ಪದವನ್ನು ಟ್ವೀಟ್ ಮಾಡಿದ್ದ ಪಕ್ಷದ ಟ್ವೀಟ್ ಅನ್ನು ಡಿಲೀಟ್ ಮಾಡಿದೆ.
ಸೋನಿಯಾ ಗಾಂಧಿ ಅವರ ಭಾಷಣದಲ್ಲಿ ಕರ್ನಾಟಕದ ಸಾರ್ವಭೌಮತ್ವದ ಟೀಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಸರಿಪಡಿಸುವಂತೆ ಚುನಾವಣಾ ಆಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಮವಾರ ಸೂಚಿಸದ ನಂತರ ಕಾಂಗ್ರೆಸ್ ಈ ಸ್ಪಷ್ಟೀಕರಣವನ್ನು ನೀಡಿದೆ.
The word ‘sovereignty’ was never used by Smt Sonia Gandhi Ji in her speech dated May 6, 2023 at Hubballi, Karnataka.
— Congress (@INCIndia) May 10, 2023
Since this has been erroneously reported – it is being deleted.https://t.co/NcvwPmt2o9 pic.twitter.com/hFu8xe7t2p
ಮೇ 6, 2023 ರಂದು ಕರ್ನಾಟಕದ ಹುಬ್ಬಳ್ಳಿಯಲ್ಲಿ ಸೋನಿಯಾ ಗಾಂಧಿ ಅವರು ಮಾಡಿದ ಭಾಷಣದಲ್ಲಿ ಸಾರ್ವಭೌಮತ್ವ ಎಂಬ ಪದವನ್ನು ಎಂದಿಗೂ ಬಳಸಿಲ್ಲ. ಇದನ್ನು ತಪ್ಪಾಗಿ ವರದಿ ಮಾಡಲಾಗಿರುವುದರಿಂದ ಅದನ್ನು ಡಿಲೀಟ್ ಮಾಡಲಾಗುತ್ತಿದೆ” ಎಂದು ಕಾಂಗ್ರೆಸ್ ಬುಧವಾರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಹಿಂದಿಯಲ್ಲಿ ಸೋನಿಯಾ ಗಾಂಧಿ ಭಾಷಣದ ಸ್ಕ್ರೀನ್ಶಾಟ್ ಮತ್ತು ಭಾಷಣದ ಯೂಟ್ಯೂಬ್ ವೀಡಿಯೊ ಲಿಂಕ್ ಅನ್ನು ಸಹ ಹಂಚಿಕೊಂಡಿದೆ.
ಸೋನಿಯಾ ಗಾಂಧಿ ಮತ್ತು ಅವರ ಪಕ್ಷದ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಸಂಬಂಧ ಚುನಾವಣಾ ಆಯೋಗ ಖರ್ಗೆ ಅವರಿಗೆ ನೋಟಿಸ್ ಸಹ ನೀಡಿತ್ತು.