Home Uncategorized ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ: ಸಿದ್ದರಾಮಯ್ಯ

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ: ಸಿದ್ದರಾಮಯ್ಯ

33
0

ಬೆಂಗಳೂರು: ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದು ಹೇಳಿದ್ದಾರೆ.

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುವುದು ನಮ್ಮ ಆಶಯ. ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ. ಗ್ಯಾರಂಟಿಗಳ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಬರೆದಿದ್ದಾರೆ.

ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ.
ನಾವು ಉಳಿದವರಂತೆ ವಚನ ಭ್ರಷ್ಟರಲ್ಲ,
ವಚನ ಪಾಲಕರು.

ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ,
ಈ… pic.twitter.com/v9L6bWlheu

— CM of Karnataka (@CMofKarnataka) January 13, 2024

LEAVE A REPLY

Please enter your comment!
Please enter your name here