Home Uncategorized ಜನಸೇವೆ ನಮ್ಮ ಏಕೈಕ ಸೂತ್ರ, ಸಂವಿಧಾನ ಉಳಿಸಲು ಬಯಸುವವರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಬಹುದು: ಸುರ್ಜೇವಾಲಾ

ಜನಸೇವೆ ನಮ್ಮ ಏಕೈಕ ಸೂತ್ರ, ಸಂವಿಧಾನ ಉಳಿಸಲು ಬಯಸುವವರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಬಹುದು: ಸುರ್ಜೇವಾಲಾ

22
0

ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಹೇಳಿದ್ದಾರೆ. ನವದೆಹಲಿ: ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯವಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಪ್ರಮಾಣವಚನ ಸ್ವೀಕಾರ ಸಮಾರಂಭವು ಶನಿವಾಸ ನಡೆಯಲಿದೆ ಎಂದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ ಅವರು, ನಮ್ಮ ಏಕೈಕ ಸೂತ್ರವೆಂದರೆ ಜನಸೇವೆ. ಜನರ ಸೇವೆಯನ್ನು ಯಾರು ಬೇಕಾದರೂ ಮಾಡಬಹುದು, ಯಾರು ಎಷ್ಟು ಬೇಕಾದರೂ ಮಾಡಬಹುದು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಮ್ಮ ಎಲ್ಲಾ ಮಿತ್ರರನ್ನೂ ಆಹ್ವಾನಿಸಲಾಗುತ್ತದೆ. ಇದು ಆಚರಣೆಯಲ್ಲ. ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್‌ನ ಸಮರ್ಪಣೆಯಾಗಿದೆ. ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here