ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿಗೆ ರಾಜ್ಯ ಕಾಂಗ್ರೆಸ್ ಟಕ್ಕರ್ ಕೊಟ್ಟಿದೆ. ಬೆಂಗಳೂರು: ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿಗೆ ರಾಜ್ಯ ಕಾಂಗ್ರೆಸ್ ಟಕ್ಕರ್ ಕೊಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ ಎಂದು ಕಾಲೆಳೆದಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿ ಕರ್ನಾಟಕದ್ದೋ ?ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! ಎಂದು ಬಿಜೆಪಿ ಪ್ರಶ್ನಿಸಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?ಸೋಲಿನ ಹೊಣೆ ಯಾರದ್ದು @BJPKarnataka ?ಅಮಿತ್ ಷಾಅವರದ್ದೋ?ಬೊಮ್ಮಾಯಿಯವರದ್ದೋ?ಮೋದಿಯವರದ್ದೋ ?ನಳಿನ್ ಕಟೀಲರದ್ದೋ?ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!— Karnataka Congress (@INCKarnataka) May 25, 2023