ಚಿತ್ರದುರ್ಗ;- ಜೆಡಿಎಸ್-ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜೆಡಿಎಸ್ ಮತ್ತು ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ.
ಯಾವುದೇ ಸರ್ಕಾರ ಮಾಡದ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕ್ರಾಂತಿಕಾರಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಸರ್ಕಾರ ಬಡವರಿಗೆ ಸಹಾಯ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ನಾಯಕರ ಕಣ್ಣು ಕುಕ್ಕುತ್ತಿದೆ. ನಮ್ಮ ಸರ್ಕಾರ ಬಡವರು, ರೈತರು, ದುಡಿಯುವ ವರ್ಗದ ಪರವಿದೆ. ಜೆಡಿಎಸ್ ಮತ್ತು ಬಿಜೆಪಿಯವರು ಒಂದಾಗಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರನ್ನು ಜೈಲಿಗೆ ಕಳಿಸುವುದಾಗಿ ಹೇಳುತ್ತಿದ್ದಾರೆ. ಸೇಡಿನ ರಾಜಕಾರಣ ಮುಂದುವರಿದರೆ ಜನರೇ ಉತ್ತರ ನೀಡುತ್ತಾರೆ ಎಂದರು.
The post ಜೆಡಿಎಸ್ ಬಿಜೆಪಿಯವರು ಒಂದಾಗಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ – ಕೃಷ್ಣ ಬೈರೇಗೌಡ appeared first on Ain Live News.