ಮೈಸೂರು: ಜೇನು ಕುರುಬರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಅವರಿಗೆ ಪದ್ಮಶ್ರೀ ಲಭಿಸಿದೆ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಹೋಬಳಿಯ ಮೊತ್ತ ಹಾಡಿ ನಿವಾಸಿ ಸೋಮಣ್ಣ ಅವರು ಬಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ 1981ರಲ್ಲಿ ಎಚ್.ಡಿ.ಕೋಟೆ ತಾಲೂಕಿನಲ್ಲಿ ಪ್ರಾರಂಭಗೊಂಡ ಪೆಡಿನ ವಿಕಾಸ ಎನ್ಜಿಒ ಸಂಸ್ಥೆ ಮೂಲಕ ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಹೋರಾಟಕ್ಕಿಳಿದರು.
ಈ ಸಂಸ್ಥೆಯ ಮುಖ್ಯಸ್ಥ ದಿವಂಗತ ಕ್ಷೀರಸಾಗರ್ ಅವರ ಮಾರ್ಗದರ್ಶನದಲ್ಲಿ ಬುಡಕಟ್ಟು ಸಮುದಾಯದ ಪರ ಹೋರಾಟ ಮಾಡುತ್ತಿದ್ದ ನಂಜುಂಡಯ್ಯ ಮತ್ತು ಪ್ರಸನ್ನ ಅವರ ಸಹಕಾರದಲ್ಲಿ ಬುಡಕಟ್ಟು ಸಮುದಾಯದ ಪರ ಹೋರಾಟ ಮಾಡುತ್ತಿದ್ದರು.
ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾಗಿ ಅರಣ್ಯ ಹಕ್ಕು ಕಾಯ್ದೆ, ಅರಣ್ಯ ಒತ್ತುವರಿ ತೆರವುಗೊಳಿಸುವುದು, ಬುಡಕಟ್ಟು ಸಮುದಾಯದವರ ಒತ್ತುವರಿ ಭೂಮಿ ಬಿಡಿಸುವುದು ಸೇರಿದಂತೆ ಹಲವಾರು ಹೋರಾಟಗಳಲ್ಲಿ ಭಾಗವಹಿಸಿ ಬುಡಕಟ್ಟು ಸಮುದಾಯದ ಪರ ನಿರಂತರವಾಗಿ ಸೋಮಣ್ಣ ಹೋರಾಟ ಮಾಡಿಕೊಂಡು ಬಂದಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಜೇನು ಕುರುಬ, ಬೆಟ್ಟ ಕುರುಬ, ಸೋಲಿಗ, ಪಂಜರೆ, ಹೆರವ, ಸಣ್ಣ ಹೆರವ ಸಮುದಾಯಗಳ ಪರ ಧ್ವನಿ ಎತ್ತುತ್ತಿದ್ದರು. ಇವರಿಗೆ ಇತ್ತೀಚೆಗೆ ರಾಜ್ಯ ವಾಲ್ಮೀಕಿ ಪ್ರಶಸ್ತಿಯೂ ಲಭಿಸಿತ್ತು.