ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ. ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ ಎಂದಿದ್ದಾರೆ.
ಮುಂದುವರಿದು, ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.
ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.
— Siddaramaiah (@siddaramaiah) May 21, 2023
ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅವರು, ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ನೀಡಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು.
ಇದನ್ನೂ ಓದಿ: ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಜೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಲವರು ಉತ್ತಮ ನಿರ್ಧಾರ ಎಂದು ಶ್ವಾಘಿಸಿದ್ದಾರೆ.