Home Uncategorized ತೀರ್ಥಹಳ್ಳಿ ಕ್ಷೇತ್ರದಲ್ಲಿ 618 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ತೀರ್ಥಹಳ್ಳಿ ಕ್ಷೇತ್ರದಲ್ಲಿ 618 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

27
0

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಂದು (ನ. 27) ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕು ಕ್ರೀಡಾಂಗಣದಲ್ಲಿ 618 ಕೋಟಿ ರೂ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ  ಸಾಥ್​ ನೀಡಿದರು.

ಔಷಧಿಗಾಗಿ ಸರ್ಕಾರದಿಂದ 10 ಕೋಟಿ ರೂ ಬಿಡುಗಡೆ

ಮಲೆನಾಡು ಭಾಗದಲ್ಲಿ ಅತೀ ಮಳೆಯಾದ ಕಾರಣ 42,000 ಹೆಕ್ಟೇರ್​​ ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಬಂದಿದೆ ಎಂದು ತೀರ್ಥಹಳ್ಳಿ ತಾಲೂಕಿನ ಉಂಟೂರು ಕೈಮರ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಔಷಧಿಗಾಗಿ ಈಗಾಗಲೇ ಸರ್ಕಾರ 10 ಕೋಟಿ ರೂ ಬಿಡುಗಡೆ ಮಾಡಿದೆ. ರೋಗ ನಿಯಂತ್ರಣಕ್ಕೆ ಎಷ್ಟು ಹಣ ಖರ್ಚಾದರೂ ಕೊಡಲು ಸಿದ್ಧವಿದ್ದೇವೆ. ಅಡಕೆ ಬೆಳೆಗಾರರು ಧೈರ್ಯ ಕಳೆದುಕೊಳ್ಳುವುದು ಬೇಡ. ನಿಮ್ಮೊಂದಿಗೆ ಸರ್ಕಾರ ಇದೆ. ಬಗರ್ ಹುಕುಂ ಪ್ರದೇಶದಲ್ಲಿ ಅಡಕೆ ಬೆಳೆದಿರುವ ರೈತರಿಗೂ ಸರ್ಕಾರ ಸಹಾಯ ಮಾಡಲಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here