ದೇವಾಲಯಗಳನ್ನು ಸ್ವಚ್ಛವಾಗಿಡುವ ಸಲುವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು “ಸ್ವಚ್ಛ ಮಂದಿರ ಅಭಿಯಾನವನ್ನು ಪ್ರಾರಂಭಿಸಿದೆ. ಬೆಂಗಳೂರು: ದೇವಾಲಯಗಳನ್ನು ಸ್ವಚ್ಛವಾಗಿಡುವ ಸಲುವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು “ಸ್ವಚ್ಛ ಮಂದಿರ ಅಭಿಯಾನವನ್ನು ಪ್ರಾರಂಭಿಸಿದೆ.
ರಾಜ್ಯದ 12 ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಈ ಅಭಿಯಾನವು ಫೆಬ್ರವರಿ 10 ರಂದು ಪ್ರಾರಂಭಿಸಲಾಗುತ್ತಿದೆ.
ದೇವಸ್ಥಾನಗಳಲ್ಲಿ ಸ್ವಚ್ಛ ಪರಿಸರ ಒದಗಿಸುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ಅವರು ನೀಡಿದ ಸೂಚನೆ ಮೇರೆಗೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿದುಬಂದಿದೆ.
ಇದರಂತೆ, ಮೊದಲ ಹಂತದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಪ್ರಮುಖ 12 ದೇಗುಲಗಳಲ್ಲಿ ʻಸ್ವಚ್ಛ ಮಂದಿರ ಅಭಿಯಾನʼ ಯೋಜನೆ ಪ್ರಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದನ್ನು ಶಶಿಕಲಾ ಜೊಲ್ಲೆ ಅವರು ಫೆ.10ರಂದು ಲೋಕಾರ್ಪಣೆ ಮಾಡಲಿದ್ದಾರೆ.