Home Uncategorized ದೇರಳಕಟ್ಟೆಯ ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’ ಕಾರ್ಯಕ್ರಮ

ದೇರಳಕಟ್ಟೆಯ ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’ ಕಾರ್ಯಕ್ರಮ

24
0

ದೇರಳಕಟ್ಟೆ,ಡಿ.23: ‘ಕಾವ್ಯಮಾರ್ಗ ಸುಲಭ ಹಾದಿಯಲ್ಲ. ತನ್ನ ಮನೋಧರ್ಮವನ್ನು ಅನುಸರಿಸಿ ಬರೆಯುವಾತ ಕವಿಯಾ ಗಲಾರ. ಅದನ್ನು ಜನಮಾನಸಕ್ಕೆ ಹಿತವಾಗುವಂತೆ ಕಟ್ಟಿಕೊಡುವ ಕೌಶಲವು ಕವಿಗೆ ಬೇಕಾಗುತ್ತದೆ. ಕವಿತೆ ಚಿರಾಯು ವಾಗಬೇಕಾದರೆ ಅದನ್ನು ದೃಶ್ಯ ಕಾವ್ಯವಾಗಿಸುವ ಸಾಮರ್ಥ್ಯ ಅಗತ್ಯವಿದೆ. ಗೇಯ ಕವನಗಳ ಮೂಲಕ ಇದನ್ನು ಸಾಧಿಸಬಹುದು’ ಎಂದು ಕವಿ-ಕಲಾವಿದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು.

ದೇರಳಕಟ್ಟೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ 12ನೇ ವರ್ಷದ ಕನ್ನಡ ನಾಡು ನುಡಿ ವೈಭವದ ‘ರತ್ನೋತ್ಸವ – 2023’ ಕರಾವಳಿ ಕರ್ನಾಟಕ ಸಾಹಿತ್ಯ – ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಏರ್ಪಡಿಸಲಾದ ‘ಕವಿ – ಕಾವ್ಯ – ಚಿತ್ತಾರ’ ಸರಸ ಕವಿಗೋಷ್ಠಿಯಲ್ಲಿ ಅವರ ಆಶಯ ನುಡಿಗಳನ್ನಾಡಿದರು.

ಸಮ್ಮೇಳನದ ಸರ್ವಾಧ್ಯಕ್ಷ ಡಾ. ಕೆ.ಚಿನ್ನಪ್ಪ ಗೌಡ ಉಪಸ್ಥಿತರಿದ್ದರು. ಹಿರಿಯ ಗಜಲ್ ಕವಿ ಡಾ. ಸುರೇಶ್ ನೆಗಳಗುಳಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಕವಿಗಳಾದ ಚಂದ್ರಹಾಸ ಕೋಟೆಕಾರ್, ಕರುಣಾಕರ ಬಳ್ಕೂರು, ಶಾಂತಪ್ಪಬಾಬು, ಸಂಶೀರ್ ಬುಡೋಳಿ, ನಾರಾಯಣ ಕುಂಬ್ರ, ವಸಂತಿ ನೆಡ್ಲೆ, ಜೋಯ್ಸ್ ಪಿಂಟೋ ಕಿನ್ನಿಗೋಳಿ ಸ್ವರಚಿತ ಕವಿತೆಗಳನ್ನು ವಾಚಿಸಿದರು.

ಗಾಯಕರಾದ ತೋನ್ಸೆ ಪುಷ್ಕಳ ಕುಮಾರ್ ಮತ್ತು ಸೌಮ್ಯ ಭಟ್ ಕಟೀಲು ಗೋಷ್ಠಿಯ ಕವಿತೆಗಳನ್ನು ಸ್ವರಬದ್ಧಗೊಳಿಸಿ ಹಾಡಿದರು. ಚಿತ್ರ ಕಲಾವಿದೆ ಆಶ್ರಿತಾ ರೈ ಅವುಗಳ ಭಾವಕ್ಕನುಗುಣವಾಗಿ ಚಿತ್ರಗಳನ್ನು ರಚಿಸಿದರು. ಹಿನ್ನೆಲೆಯಲ್ಲಿ ಸತೀಶ್ ಸುರತ್ಕಲ್, ನವಗಿರಿ ಗಣೇಶ್ ಸ್ವರಾಜ್ ಮಂಜೇಶ್ವರ, ಸಂತೋಷ್ ವಿಟ್ಲ ಸಹಕಾರ ನೀಡಿದರು.

ವಿದ್ಯಾರತ್ನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಸಂಚಾಲಕಿ ಸೌಮ್ಯ ಆರ್. ಶೆಟ್ಟಿ ವಂದಿಸಿದರು. ಸಲಹೆಗಾರ ರವೀಂದ್ರ ರೈ ಕಲ್ಲಿಮಾರು, ಉಪಾಧ್ಯಕ್ಷ ಮೋಹನದಾಸ ಶೆಟ್ಟಿ ಉಳಿದೊಟ್ಟು, ಮುಖ್ಯ ಶಿಕ್ಷಕಿ ನಯೀಮ್ ಹಮೀದ್, ರತ್ನ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷೆ ಸಲೀನಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here