Home Uncategorized ದೇವನಹಳ್ಳಿ: ಈಜಲು ಹೋದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು!

ದೇವನಹಳ್ಳಿ: ಈಜಲು ಹೋದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು!

19
0

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಈಜಲು ಹೋಗಿ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ದೇವನಹಳ್ಳಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಈಜಲು ಹೋಗಿ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.

ದೇವನಹಳ್ಳಿಯ ದೇವನಾಯಕನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಇಬ್ಬರು ಬಾಲಕರ ಮೃತದೇಹಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಜುನೇದ್‌ ಪಾಷ (14) ಎಂಬ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು ಇಂದು ಮತ್ತೆ ಮತ್ತೊರ್ವ ವಿದ್ಯಾರ್ಥಿ ಸಂತೋಷ್‌ (14) ಮೃತದೇಹ ಹೊಂಡದಲ್ಲಿ ಪತ್ತೆಯಾಗಿದೆ. ಮೃತ ಸಂತೋಷ್‌ ಹೊಸಕೋಟೆಯ ವಳಗೆರೆಪುರ ನಿವಾಸಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು; ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪ; ಆಂಧ್ರ ಪ್ರದೇಶದ ಮೂವರ ವಿರುದ್ಧ FIR

ಆಗಿದ್ದೇನು?
ನಿನ್ನೆ ಮೊರಾರ್ಜಿ ವಸತಿ ಶಾಲೆಯ ಆರೇಳು ವಿದ್ಯಾರ್ಥಿಗಳು ಹಾಸ್ಟೆಲ್‌ ಪಕ್ಕದ ಹೊಂಡದಲ್ಲಿ ಈಜಲು ತೆರಳಿದ್ದರು. ವಸತಿ ಶಾಲೆಯ ಮೆಲ್ವಿಚಾರಕನೊಬ್ಬ ವಿದ್ಯಾರ್ಥಿಗಳನ್ನ ಈಜಲು ಕರೆದುಕೊಂಡು ಹೋಗಿದ್ದ. ಈ ರೀತಿ ವಸತಿ ಶಾಲೆಯ ಬೇಜವ್ದಾರಿತನಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿದ್ದು, ಜಿಲ್ಲಾಧಿಕಾರಿಗಳು ತಾಲೂಕು ಆಡಳಿತ ಸ್ಥಳಕ್ಕೆ ಬರಬೇಕು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹ ಮಾಡುತ್ತಿದ್ದಾರೆ.
 

LEAVE A REPLY

Please enter your comment!
Please enter your name here