Home ಕರ್ನಾಟಕ ನಟ ದರ್ಶನ್ ಸೇರಿ ಆರೋಪಿಗಳಿಗೆ ಯಾವುದೇ ವಿಶೇಷ ಆತಿಥ್ಯ ಬೇಡ : ಸಿಎಂ ಸಿದ್ದರಾಮಯ್ಯ

ನಟ ದರ್ಶನ್ ಸೇರಿ ಆರೋಪಿಗಳಿಗೆ ಯಾವುದೇ ವಿಶೇಷ ಆತಿಥ್ಯ ಬೇಡ : ಸಿಎಂ ಸಿದ್ದರಾಮಯ್ಯ

21
0

ಬೆಂಗಳೂರು : ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಸಹವರ್ತಿಗಳಿಗೆ ಯಾವುದೇ ವಿಶೇಷ ಆತಿಥ್ಯ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಲು ಹೋದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಈ ಬಗ್ಗೆ ಸೂಚನೆ ನೀಡಿದ್ದಾರೆ.

ಸುದ್ದಿ ಮಾಧ್ಯಮಗಳಲ್ಲಿ ಆರೋಪಿಗಳಾದ ನಟ ದರ್ಶನ್ ಹಾಗೂ ಸಹಚರರಿಗೆ ವಿಶೇಷ ಆತಿಥ್ಯ ಕೊಡುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಆರೋಪಿಗಳಿಗೆ ಯಾವುದೇ ವಿಶೇಷ ಆತಿಥ್ಯ ಕೊಡಬೇಡಿ. ಆರೋಪಿಗಳಿಗೆ ಆರೋಪಿಗೆ ನೀಡಬೇಕಾದ ಟ್ರೀಟ್ಮೆಂಟ್ ಕೊಡಿ. ಯಾವುದೇ ಸ್ಪೆಷಲ್ ಟ್ರಿಟ್ಮೆಂಟ್ ಬೇಡ. ಮಾಧ್ಯಮಗಳಲ್ಲಿ ಪೊಲೀಸ್ ಠಾಣೆ ಮುಚ್ಚಿದ್ದಾರೆ ಅಂತ ಸುದ್ದಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ದರ್ಶನ್ ಬೆಂಬಲಿಗರು ಬರಬಹುದು ಹಾಗೂ ಮಾಧ್ಯಮಗಳು ವಿಡಿಯೋ ಮಾಡುತ್ತಾರೆ ಅಂತ ಶಾಮಿಯಾನ ಹಾಕಲಾಗಿದೆ ಎಂದು ಮುಖ್ಯಮಂತ್ರಿಗೆ ಪೊಲೀಸ್ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ.

LEAVE A REPLY

Please enter your comment!
Please enter your name here