ನಟಿ ತ್ರಿಷಾ ಕೃಷ್ಣನ್ ಹಳೆಯ ಹೇಳಿಕೆಯೊಂದು ದಳಪತಿ ವಿಜಯ್ ಜೊತೆಗಿನ ಸಂಬಂಧದ ಗಾಸಿಪ್ ಹಿನ್ನೆಲೆಯಲ್ಲಿ ವೈರಲ್ ಆಗಿದೆ. ಈ ಹಿಂದೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ತ್ರಿಷಾ, ವಿಚ್ಛೇದನದಲ್ಲಿ ತನಗೆ ನಂಬಿಕೆಯಿಲ್ಲ ಎಂದಿದ್ದರು. ಮದುವೆಗೂ ಮುನ್ನ 100 ಬಾರಿ ಯೋಚಿಸುತ್ತೇನೆ, ಅತೃಪ್ತ ಜೀವನ ನಡೆಸಲು ಇಷ್ಟವಿಲ್ಲ ಎಂದೂ ಹೇಳಿದ್ದರು.
ಇಂಡಿಯಾಗ್ಲಿಟ್ಜ್ (2016) ಗೆ ನೀಡಿದ ಹಳೆಯ ಸಂದರ್ಶನದಲ್ಲಿ, ತ್ರಿಶಾ ವಿಚ್ಛೇದನದಲ್ಲಿ ನಂಬಿಕೆಯಿಲ್ಲದ ಕಾರಣ, ಮದುವೆಯಾಗುವ ಮೊದಲು ಒಬ್ಬ ಪುರುಷನ ಬಗ್ಗೆ ಖಚಿತವಾಗಿರಲು ಬಯಸಿದ್ದೆ ಎಂದು ಹೇಳಿದರು.
ನಾನು ವಿಚ್ಛೇದನದಲ್ಲಿ ನಂಬಿಕೆ ಇಟ್ಟಿಲ್ಲ. ಹೀಗಾಗಿ, ನಾನು ಜೀವನ ಮಾಡಬೇಕಾದ ವ್ಯಕ್ತಿ ಇವರೇ ಎಂದು ಫೀಲ್ ಆಗಬೇಕು. ನಾನು ಮದುವೆಯಾದ ಬಳಿಕ ವಿಚ್ಛೇದನ ಪಡೆಯಲು ಬಯಸುವುದಿಲ್ಲ. ಅದೂ ನಾನಿಷ್ಟ ಪಟ್ಟ ವ್ಯಕ್ತಿಯಿಂದ ದೂರ ಆಗಲ್ಲ ಎಂದು ಅವರು ಹೇಳಿದರು.
ನನಗೆ ವಿಚ್ಛೇದನದಲ್ಲಿ ನಂಬಿಕೆ ಇಲ್ಲ. ಮದುವೆಗೂ ಮುನ್ನ 100 ಬಾರಿ ಯೋಚಿಸುತ್ತೇನೆ. ಬೇರೆಯವರಿಗೆ ನೋವುಂಟು ಮಾಡಲು ಅಥವಾ ಅತೃಪ್ತ ಜೀವನ ನಡೆಸಲು ನಾನು ಬಯಸುವುದಿಲ್ಲ’ ತ್ರಿಷಾ ಈ ಮೊದಲು ಹೇಳಿದ್ದರು.
ನನ್ನ ಸುತ್ತಲಿರೋ ಅನೇಕರು ತಪ್ಪು ಕಾರಣಗಳಿಗಾಗಿ ಮದುವೆಯಾಗುತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅವರು ತುಂಬಾ ಅತೃಪ್ತರು. ನಾನು ಅಂತಹ ದಾಂಪತ್ಯದಲ್ಲಿರಲು ಬಯಸುವುದಿಲ್ಲ. ನಾನು ಪ್ರೀತಿಯಲ್ಲಿ ಬೀಳಲು ಬಯಸುತ್ತೇನೆ. ನಾನು ಅದರ ಬಗ್ಗೆ ತುಂಬಾ ನಿರ್ದಿಷ್ಟವಾಗಿದ್ದೇನೆ. ಹೀಗಾಗಿ, ಮದುವೆಗೂ ಮೊದಲು ನಾನು ಯೋಚಿಸುತ್ತೇನೆ ಎನ್ನುತ್ತಾರೆ ತ್ರಿಷಾ.
ವಿಜಯ್ ವಿರುದ್ಧ ಸಂಗೀತ ಗಂಭೀರ ಆರೋಪ ಮಾಡಿದ್ದಾರೆ. ಪತಿ ವಿಜಯ್ಗೆ ಅಕ್ರಮ ಸಂಬಂಧ ಇದೆ ಎಂದು ಅವರು ಆರೋಪಿಸಿದ್ದಾರೆ. ವಿಜಯ್ ಅಕ್ರಮ ಸಂಬಂಧ ಹೊಂದಿರೋದು ತ್ರಿಷಾ ಜೊತೆ ಎಂದು ಎಲ್ಲರೂ ಕಲ್ಪಿಸಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ತ್ರಿಷಾ ಅವರು ಈ ಮೊದಲು ವಿವಾಹದ ಬಗ್ಗೆ ಮಾತನಾಡಿದ್ದರು. ತ್ರಿಷಾಗೆ ಈ ಮೊದಲು ನಿಶ್ಚಿತಾರ್ಥ ಆಗಿತ್ತು. ಅದನ್ನು ಅವರು ಮುರಿದುಕೊಂಡರು. ಇದಕ್ಕೆ ಕಾರಣವನ್ನೂ ಅವರು ನೀಡಿದ್ದರು. ತ್ರಿಷಾಗೆ ಆ ವ್ಯಕ್ತಿ ಸಾಕಷ್ಟು ಷರತ್ತುಗಳನ್ನು ಹಾಕುತ್ತಿದ್ದರಂತೆ. ಈ ಕಾರಣದಿಂದ ಅವರು ಸಂಬಂಧ ಮುಂದುವರಿಸಲೇ ಇಲ್ಲ.
